Featured

ಗೌರಿ ಹತ್ಯೆ ಪ್ರಕರಣದ ಆರೋಪಿ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ, ಆರ್‌ಎಸ್‌ಎಸ್‌ ಕಾರ್ಯಕರ್ತ – ಮುತಾಲಿಕ್

ಮಂಗಳೂರು, : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆ ಶ್ರೀರಾಮ ಸೇನೆ ಕಾರ್ಯಕರ್ತ ಅಲ್ಲ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೌರಿ ಹತ್ಯೆ ಪ್ರಕರಣದಲ್ಲಿ ಪರಶುರಾಮ್ ವಾಗ್ಮೋರೆ ಭಾಗಿಯಾಗಿದ್ದಾನೆಂಬುದನ್ನು ನಾನು ಒಪ್ಪಲಾರೆ. ಆದರೆ, ವಾಗ್ಮೋರೆ ಆರ್’ಎಸ್ಎಸ್ ಸದಸ್ಯ ಎಂದು ಹೇಳಿದ್ದಾರೆ.

ಮಾನವೀಯತೆಯ ಆಧಾರದ ಮೇರೆಗೆ ವಾಗ್ಮೋರೆ ಕುಟುಂಬಸ್ಥರನ್ನು ಸಂಘಟನೆ ಭೇಟಿ ಮಾಡಿತ್ತು. ಹಲವು ಆರೋಪಗಳ ಮೇರೆಗೆ ಇತ್ತೀಚಿನ ದಿನಗಳಲ್ಲಿ ಹಿಂದು ಕಾರ್ಯಕರ್ತರನ್ನು ಗುರಿ ಮಾಡಲಾಗುತ್ತಿದೆ. ಗೌರಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರ ಕುರಿತು ಸೂಕ್ತ ರೀತಿಯ ಸಾಕ್ಷ್ಯಾಧಾರಗಳು ಪೊಲೀಸರ ಬಳಿಯಿಲ್ಲ. ಈ ವಿಚಾರದಲ್ಲಿ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದಿದ್ದಾರೆ.

ಸಿಂಧಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ಇದ್ದದ್ದು ಆರ್‌ಎಸ್‌ಎಸ್ ಕಾರ್ಯಕರ್ತರು. ಪರಶುರಾಮ್ ವಾಗ್ಮೋರೆ ಸಹ ಅದೇ ಪ್ರಕರಣದಲ್ಲಿ ಇದ್ದ. ಹಾಗಾಗಿ ಆತ ಆರ್‌ಎಸ್‌ಎಸ್‌ ಕಾರ್ಯಕರ್ತ ಇರಬಹುದು ಎಂದು ಅವರು ಹೇಳಿದ್ದಾರೆ.

ಒಂದು ಚಿತ್ರ ಇಟ್ಟುಕೊಂಡು ಶ್ರೀರಾಮಸೇನೆಗೆ ಕೆಟ್ಟ ಹೆಸರು ಬಳಿಯುವ ಯತ್ನ ಮಾಡಲಾಗುತ್ತಿದೆ. ಸನಾತನ ಸಂಸ್ಥೆಯನ್ನು ನಿಷೇಧ ಮಾಡಬೇಕು ಎಂದು ಹೋರಾಟ ನಡೆಯುತ್ತಿದೆ. ವಿಚಾರವಾದಿಗಳು, ಯೋಧರ, ವಿಜ್ಞಾನಿಗಳ ಹತ್ಯೆ ಬಗ್ಗೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ವಾಗ್ಮೋರೆ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಮದುವೆ ಅಥವಾ ಯಾವುದೋ ಕಾರ್ಯಕ್ರಮದಲ್ಲಿ ತೆಗೆದಿರುವ ಫೋಟೋಗಳು ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

17 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

17 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

18 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

18 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

18 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

18 hours ago