ನವದೆಹಲಿ: ಕರಾವಳಿ ಮೂಲದ , ಮುಂಬೈ ನಲ್ಲಿ ಗ್ಯಾಂಗ್ ಸ್ಟಾರ್ ಆಗಿದ್ದ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ ದೇಶದಿಂದ ಹಸ್ತಾಂತರಿಸಿಲಾಗಿದ್ದು , ನಿನ್ನೆ (ಮಂಗಳವಾರ )ರಾತ್ರಿ ಭಾರತಕ್ಕೆ ಕರೆತರಲಾಗಿದೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಂಡರ್ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿ ಬಳಿಕ ತನ್ನದೇ ನಟೋರಿಯಸ್ ಗ್ಯಾಂಗ್ ಕಟ್ಟಿಕೊಂಡು ಮುಂಬೈನಲ್ಲಿ ಬಾರ್ ಮಾಲೀಕರಿಂದ, ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಸ್ಟಾರ್ ಸುರೇಶ್ ಪೂಜಾರಿ ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಮತ್ತು ಡೊಂಬಿವಿಲಿಯಲ್ಲಿ ನಡೆದ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ.
ದೆಹಲಿಗೆ ಕರೆತಂದ ಬಳಿಕ ಪೂಜಾರಿಯನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದು, ಆ ಬಳಿಕ ಆತನನ್ನು ಮುಂಬೈ ಪೊಲೀಸರಿಗೆ ಕಸ್ಟಡಿಗೆ ಒಪ್ಪಿಸುವ ಸಾಧ್ಯತೆ ಇದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…