ಹಾವೇರಿ: ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ ಎಂದು ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ ಟಿಯಲ್ಲಿ ಸೋರಿಕೆಯಾಗುತ್ತಿದೆ. ಸಿಎಂ ಯಾಕೆ ಸುಮ್ಮನೆ ಕುಳಿತಿದ್ದಾರೆ. ಪ್ಲ್ಯಾಸ್ಟಿಕ್, ಅಡಿಕೆ, ಸ್ಕ್ರ್ಯಾಪ್ ವ್ಯಾಪಾರದಲ್ಲಿ ಸೋರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲೆ ಹೊರೆ ಹಾಕುವುದಲ್ಲ ಎಂದರು.
ಗ್ಯಾರಂಟಿ ಬಂದ್ ಮಾಡುವಂತೆ ನಾವ್ಯಾಕೆ ಹೇಳಲಿ. ಗ್ಯಾರಂಟಿ ಯೋಜನೆ ಕೊಡಿ ಎಂದು ಹೇಳುತ್ತೇವೆ ನಾವು. ಗ್ಯಾರಂಟಿ ಕೊಡುತ್ತೇವೆಂದು ಜನರಿಗೆ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ, ಗ್ಯಾರಂಟಿ ಕೊಡಿ. ಗ್ಯಾರಂಟಿಯೂ ಕೊಡಬೇಕು ಅಭಿವೃದ್ಧಿಯೂ ಮಾಡಬೇಕು. ಅವಾಗ ಸಿದ್ದರಾಮಯ್ಯನವರಿಗೆ ಶಹಬ್ಬಾಸ್ ಎನ್ನುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…