ಬೆಂಗಳೂರು : ರಾಜ್ಯ ಸರಕಾರ ಎಚ್ಚತ್ತುಕೊಳ್ಳಬೇಕಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟವನ್ನು ನಿವಾರಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಮರ್ಪಕವಾಗಿ ಆರೇಳು ತಾಸು ವಿದ್ಯುತ್ ಕೊಡಲು ರಾಜ್ಯ ಸರಕಾರದಿಂದ ಆಗುತ್ತಿಲ್ಲ; ರೈತರಿಗೆ ಯಾವಾಗ ಕರೆಂಟ್ ಬರುತ್ತದೆ; ಯಾವಾಗ ಇರುವುದಿಲ್ಲ ಎಂದು ತಿಳಿಯದಂತಾಗಿದೆ. ಇಲಾಖೆಯವರು ರಾತ್ರಿ 10 ಗಂಟೆಯಿಂದ ವಿದ್ಯುತ್ ಕೊಡುವುದಾಗಿ ಹೇಳುತ್ತಾರೆ. ರೈತರು ಹೊಲದಲ್ಲಿ ಕಾದರೂ 12 ಗಂಟೆವರೆಗೂ ವಿದ್ಯುತ್ ಬರುವುದಿಲ್ಲ ಎಂದು ಆಕ್ಷೇಪಿಸಿದರು.
ಸರಕಾರವು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಟೀಕಿಸಿದ ಅವರು, ವಿದ್ಯುತ್ ಅಭಾವ ಇದ್ದರೆ ಹೊರರಾಜ್ಯಗಳಿಂದ ಖರೀದಿ ಮಾಡಬೇಕೇ ಎಂಬುದರ ಕಡೆ ತಯಾರಿಯನ್ನು ರಾಜ್ಯ ಸರಕಾರ ಮಾಡಬೇಕಿದೆ. ವಿದ್ಯುತ್ ಅವ್ಯವಸ್ಥೆಯಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಬಾರದು. ರೈತರ ಸಂಕಷ್ಟ ಪರಿಹರಿಸಿ ಎಂದು ಆಗ್ರಹಿಸಿದರು.
ಇವತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದುಂಡುಮೇಜಿನ ಸಭೆಯನ್ನು ಆಯೋಜಿಸಿದೆ. ಶಿಕ್ಷಣ ತಜ್ಞರು, ಅನೇಕ ಹಿರಿಯರು, ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಮುಂದಿನ 5 ವರ್ಷಗಳಲ್ಲಿ 350 ಕೋಟಿ ಹಣಕಾಸು ಕೊಡಲು ಸಾಧ್ಯವಿಲ್ಲದ ಕಾರಣ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ರಾಜ್ಯ ಸರಕಾರದ ಕ್ಯಾಬಿನೆಟ್ ಉಪ ಸಮಿತಿ ಕೊಟ್ಟ ವರದಿ, ವಿವಿಗಳನ್ನು ಮುಚ್ಚುವ ಸರಕಾರದ ತೀರ್ಮಾನ ಅವೈಜ್ಞಾನಿಕ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಪರಿಷತ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಿಜೆಪಿಯ ನಾವು ಕೂಡ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಡಲಿದ್ದೇವೆ. ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…