ಬೆಂಗಳೂರು : ರಾಜ್ಯ ಸರಕಾರ ಎಚ್ಚತ್ತುಕೊಳ್ಳಬೇಕಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟವನ್ನು ನಿವಾರಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಮರ್ಪಕವಾಗಿ ಆರೇಳು ತಾಸು ವಿದ್ಯುತ್ ಕೊಡಲು ರಾಜ್ಯ ಸರಕಾರದಿಂದ ಆಗುತ್ತಿಲ್ಲ; ರೈತರಿಗೆ ಯಾವಾಗ ಕರೆಂಟ್ ಬರುತ್ತದೆ; ಯಾವಾಗ ಇರುವುದಿಲ್ಲ ಎಂದು ತಿಳಿಯದಂತಾಗಿದೆ. ಇಲಾಖೆಯವರು ರಾತ್ರಿ 10 ಗಂಟೆಯಿಂದ ವಿದ್ಯುತ್ ಕೊಡುವುದಾಗಿ ಹೇಳುತ್ತಾರೆ. ರೈತರು ಹೊಲದಲ್ಲಿ ಕಾದರೂ 12 ಗಂಟೆವರೆಗೂ ವಿದ್ಯುತ್ ಬರುವುದಿಲ್ಲ ಎಂದು ಆಕ್ಷೇಪಿಸಿದರು.
ಸರಕಾರವು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಟೀಕಿಸಿದ ಅವರು, ವಿದ್ಯುತ್ ಅಭಾವ ಇದ್ದರೆ ಹೊರರಾಜ್ಯಗಳಿಂದ ಖರೀದಿ ಮಾಡಬೇಕೇ ಎಂಬುದರ ಕಡೆ ತಯಾರಿಯನ್ನು ರಾಜ್ಯ ಸರಕಾರ ಮಾಡಬೇಕಿದೆ. ವಿದ್ಯುತ್ ಅವ್ಯವಸ್ಥೆಯಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಬಾರದು. ರೈತರ ಸಂಕಷ್ಟ ಪರಿಹರಿಸಿ ಎಂದು ಆಗ್ರಹಿಸಿದರು.
ಇವತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದುಂಡುಮೇಜಿನ ಸಭೆಯನ್ನು ಆಯೋಜಿಸಿದೆ. ಶಿಕ್ಷಣ ತಜ್ಞರು, ಅನೇಕ ಹಿರಿಯರು, ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಮುಂದಿನ 5 ವರ್ಷಗಳಲ್ಲಿ 350 ಕೋಟಿ ಹಣಕಾಸು ಕೊಡಲು ಸಾಧ್ಯವಿಲ್ಲದ ಕಾರಣ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ರಾಜ್ಯ ಸರಕಾರದ ಕ್ಯಾಬಿನೆಟ್ ಉಪ ಸಮಿತಿ ಕೊಟ್ಟ ವರದಿ, ವಿವಿಗಳನ್ನು ಮುಚ್ಚುವ ಸರಕಾರದ ತೀರ್ಮಾನ ಅವೈಜ್ಞಾನಿಕ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಪರಿಷತ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಿಜೆಪಿಯ ನಾವು ಕೂಡ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಡಲಿದ್ದೇವೆ. ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…