ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಿಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಘೋಷಣೆ ಮಾಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಫಲಾನುಭವಿಗಳು ಅರ್ಜಿ ಸಲ್ಲಿಕೆಗೆ ಮುಗಿಬಿದ್ದಿದ್ದಾರೆ.
ಇದನ್ನೇ ಬಂಡವಾಳ ಮಾಡಿಕೊಂಡು ಸೇವಾಸಿಂಧು, ಬೆಂಗಳೂರು ಒನ್ ಸೇರಿದಂತೆ ಹಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿವೆ. ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಮನಕ್ಕೆ ಬಂದಿದ್ದು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ ಎಂದು ಖಡಕ್ ವಾರ್ನಿಂಗ್ ಹೊರಡಿಸಿದ್ದಾರೆ.
ಈ ಬಗ್ಗೆ ಇಂದು(ಜೂನ್ 23) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನ ಹಣ ನೀಡುವಂತಿಲ್ಲ. ಸೇವಾಸಿಂಧು ಸೇರಿ ಹಲವು ಕೇಂದ್ರಗಳಲ್ಲಿ ಹಣ ಪಡೆಯುವ ದೂರು ಬಂದಿದೆ. ಯಾರೂ ಕೂಡ ಸಾರ್ವಜನಿಕರಿಂದ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು ಖಡಕ್ ಸೂಚನೆ ಕೊಟ್ಟರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…