ಬೆಳಗಾವಿ: ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಚಾಲನೆ ನೀಡಲಾಗಿದ್ದ ಕಾಮಗಾರಿಗಳೇ ಈಗ ಮುಂದುವರಿದಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಸೋಮವಾರ (ಏ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಇದ್ದಾಗ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಟೀಕೆ ಮಾಡುತ್ತಾರೆ. ನೀವು ಆರ್ಥಿಕ ತಜ್ಞರು ಮತ್ತು ದಾಖಲೆಯ ಬಜೆಟ್ ಮಂಡಿಸಿದ್ದೇನೆ ಎಂದು ಹೇಳುತ್ತೀರಿ. ಹಾಗಿದ್ದರೆ ನೀವು ಆರ್ಥಿಕ ಸ್ಥಿತಿ ಸರಿಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವರ ಹಸ್ತಕ್ಷೇಪದಿಂದ ನರೇಗಾ ಕಾಮಗಾರಿಗಳು ವಿಳಂಬವಾಗುತ್ತಿವೆ. ಮಾರ್ಚ್ 31 ರೊಳಗೆ ನರೇಗಾ ಕಾಮಗಾರಿಯ ಕ್ರಿಯಾ ಯೋಜನೆ ಸಿದ್ಧವಾಗಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದೆಲ್ಲದರ ಬಗ್ಗೆ ದಾಖಲೆ ಕೊಡುತ್ತೇನೆ. ಕೆಲವು ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಇದೆ ಎಂಬ ಕಾರಣಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಶೆಟ್ಟರ್ ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…