Featured

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷ 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆ : cm ಸಿದ್ದರಾಮಯ್ಯ – Vishwanews24

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷ 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆ : ಸಿದ್ದರಾಮಯ್ಯ

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್’ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.

ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮಾನ ನೀಡಲಿದ್ದಾರೆ. 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆಂದು ಹೇಳಿದರು.

ರಾಜ್ಯದಲ್ಲಿ ಈಗ ಇರುವದು ಒಂದೇ ವಿರೋಧ ಪಕ್ಷ, ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಂಡು ಕೇಸರಿ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮನಾಗಿ ಮರುಹುಟ್ಟು ಪಡೆಯಬೇಕೆಂದು ಹಿಂದೊಮ್ಮೆ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು, ಇದೀಗ ಕೋಮುವಾದಿ ಪಕ್ಷ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಪಕ್ಷದ ಜಾತ್ಯಾತೀತ ಪದವನ್ನು ಮರೆದು ಮೋದಿಯವರನ್ನು ಕೊಂಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ 39ರಿಂದ 19 ಸ್ಥಾನಕ್ಕೆ ಕುಸಿದು ಮುಂದಿನ ಚುನಾವಣೆ ವೇಳೆಗೆ ರಾಜ್ಯ ರಾಜಕಾರಣದಿಂದ ಕಣ್ಮರೆಯಾಗುವ ಭೀತಿಯಿಂದಾಗಿ ಜೆಡಿಎಸ್ ಬಿಜೆಪಿ ಜತೆ ಕೈಜೋಡಿಸಿದೆ ಎಂದು ತಿಳಿಸಿದರು.

ಇದೇ ವೇಳೆ ಬಜೆಟ್ ಕುರಿತು ವಿಪಕ್ಷಗಳ ಟೀಕೆ ಕುರಿತು ಮಾತನಾಡಿ, ಬಡವರ ವಿರುದ್ಧ ಇರುವವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ಕಲ್ಪಿಸಿರುವ ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರವು ರಾಜ್ಯದ ಪಾಲಿನ 1.87 ಲಕ್ಷ ಕೋಟಿ ರೂ.ಗಳನ್ನು ನಮಗೆ ನೀಡಿದರೆ ನಾವು ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಮಳವಳ್ಳಿಯಲ್ಲಿ 370 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಹಿಡಿದು ಬಿಜೆಪಿ-ಜೆಡಿಎಸ್ ಪಕ್ಷಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಳವಳ್ಳಿ ಮತ್ತು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ವಿರೋಧ ಪಕ್ಷಗಳ ಕೊಡುಗೆ ಏನು? ನಾವು ಅವರಂತೆ ಕೊಟ್ಟ ಮಾತನ್ನು ಉಳಿಸಿಕೊಳ್ಳಂತೆ ನಡೆಯುವುದಿಲ್ಲ. ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈ ಬಾರಿ ಪಕ್ಷವು ಎಲ್ಲಾ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago