Featured

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷ 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆ : cm ಸಿದ್ದರಾಮಯ್ಯ – Vishwanews24

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷ 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆ : ಸಿದ್ದರಾಮಯ್ಯ

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್’ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.

ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮಾನ ನೀಡಲಿದ್ದಾರೆ. 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆಂದು ಹೇಳಿದರು.

ರಾಜ್ಯದಲ್ಲಿ ಈಗ ಇರುವದು ಒಂದೇ ವಿರೋಧ ಪಕ್ಷ, ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಂಡು ಕೇಸರಿ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮನಾಗಿ ಮರುಹುಟ್ಟು ಪಡೆಯಬೇಕೆಂದು ಹಿಂದೊಮ್ಮೆ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು, ಇದೀಗ ಕೋಮುವಾದಿ ಪಕ್ಷ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಪಕ್ಷದ ಜಾತ್ಯಾತೀತ ಪದವನ್ನು ಮರೆದು ಮೋದಿಯವರನ್ನು ಕೊಂಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ 39ರಿಂದ 19 ಸ್ಥಾನಕ್ಕೆ ಕುಸಿದು ಮುಂದಿನ ಚುನಾವಣೆ ವೇಳೆಗೆ ರಾಜ್ಯ ರಾಜಕಾರಣದಿಂದ ಕಣ್ಮರೆಯಾಗುವ ಭೀತಿಯಿಂದಾಗಿ ಜೆಡಿಎಸ್ ಬಿಜೆಪಿ ಜತೆ ಕೈಜೋಡಿಸಿದೆ ಎಂದು ತಿಳಿಸಿದರು.

ಇದೇ ವೇಳೆ ಬಜೆಟ್ ಕುರಿತು ವಿಪಕ್ಷಗಳ ಟೀಕೆ ಕುರಿತು ಮಾತನಾಡಿ, ಬಡವರ ವಿರುದ್ಧ ಇರುವವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ಕಲ್ಪಿಸಿರುವ ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರವು ರಾಜ್ಯದ ಪಾಲಿನ 1.87 ಲಕ್ಷ ಕೋಟಿ ರೂ.ಗಳನ್ನು ನಮಗೆ ನೀಡಿದರೆ ನಾವು ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಮಳವಳ್ಳಿಯಲ್ಲಿ 370 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಹಿಡಿದು ಬಿಜೆಪಿ-ಜೆಡಿಎಸ್ ಪಕ್ಷಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಳವಳ್ಳಿ ಮತ್ತು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ವಿರೋಧ ಪಕ್ಷಗಳ ಕೊಡುಗೆ ಏನು? ನಾವು ಅವರಂತೆ ಕೊಟ್ಟ ಮಾತನ್ನು ಉಳಿಸಿಕೊಳ್ಳಂತೆ ನಡೆಯುವುದಿಲ್ಲ. ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈ ಬಾರಿ ಪಕ್ಷವು ಎಲ್ಲಾ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago