Featured

ಗ್ಯಾರಂಟಿ ಸಮಾವೇಶ ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮ :ಯು.ಟಿ. ಖಾದರ್‌ – Vishwanews24

ಗ್ಯಾರಂಟಿ ಸಮಾವೇಶ ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮ :ಯು.ಟಿ. ಖಾದರ್‌

ಮೂಲ್ಕಿ: ಪಂಚ ಗ್ಯಾರಂಟಿಗಳಿಂದ ಬಡ ಜನರಿಗೆ ಹೆಚ್ಚಿನ ಪ್ರಯೋಜನವಾಗಿರುವ ಜೊತೆಗೆ ಹಣಕಾಸಿನ ಚಲಾವಣೆಯಿಂದಾಗಿ ರಾಜ್ಯ ಸರ್ಕಾರವು ಅತಿ ಹೆಚ್ಚು ಜಿಎಸ್‌ಟಿ ನೀಡುವ ಎರಡನೇ ರಾಜ್ಯವಾಗಿ ಪರಗಣಿಸಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು. ಮೂಲ್ಕಿ ಗಾಂಧಿ ಮೈದಾನದಲ್ಲಿ ಮೂಲ್ಕಿ ತಾಲೂಕು ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ಗ್ಯಾರಂಟಿ ಸಮಾವೇಶವು ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮವಾಗಿದ್ದು ಆಡಳಿತ ಪಕ್ಷವು ಉತ್ತಮ ಆಡಳಿತವನ್ನು ನೀಡುವ ಕಾರ್ಯ ಮಾಡಬೇಕು.

ವಿಪಕ್ಷವು ಆಡಳಿತ ಪಕ್ಷದ ನ್ಯೂನತೆಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಬಡ ವರ್ಗಕ್ಕೆ ಸಹಕಾರ ನೀಡುವ ಜೊತೆಗೆ ರೈತರಿಗೆ ಬೆಂಬಲ ಬೆಲೆ ನೀಡಿದ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ ಎಂದರು.

ಈ ಸಂದರ್ಭ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ನಾಡು ಸಿಎಸ್‌ಐ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ದ.ಕ. ಜಿಲ್ಲಾಧಿಕಾರಿ ಮುಲೈಮುಗಿಲನ್, ಸಹಾಯಕ ಆಯುಕ್ತ ಹರ್ಷವರ್ದನ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಮೂಲ್ಕಿ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಆರ್‌ಟಿಒ ಶ್ರೀಧರ್, ಸಿಡಿಪಿಒ ಶೈಲಾ, ಮಿಥುನ್ ರೈ ಮತ್ತಿತರರಿದ್ದರು. ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago