ಮೂಲ್ಕಿ: ಪಂಚ ಗ್ಯಾರಂಟಿಗಳಿಂದ ಬಡ ಜನರಿಗೆ ಹೆಚ್ಚಿನ ಪ್ರಯೋಜನವಾಗಿರುವ ಜೊತೆಗೆ ಹಣಕಾಸಿನ ಚಲಾವಣೆಯಿಂದಾಗಿ ರಾಜ್ಯ ಸರ್ಕಾರವು ಅತಿ ಹೆಚ್ಚು ಜಿಎಸ್ಟಿ ನೀಡುವ ಎರಡನೇ ರಾಜ್ಯವಾಗಿ ಪರಗಣಿಸಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಮೂಲ್ಕಿ ಗಾಂಧಿ ಮೈದಾನದಲ್ಲಿ ಮೂಲ್ಕಿ ತಾಲೂಕು ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.
ಗ್ಯಾರಂಟಿ ಸಮಾವೇಶವು ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮವಾಗಿದ್ದು ಆಡಳಿತ ಪಕ್ಷವು ಉತ್ತಮ ಆಡಳಿತವನ್ನು ನೀಡುವ ಕಾರ್ಯ ಮಾಡಬೇಕು.
ವಿಪಕ್ಷವು ಆಡಳಿತ ಪಕ್ಷದ ನ್ಯೂನತೆಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಬಡ ವರ್ಗಕ್ಕೆ ಸಹಕಾರ ನೀಡುವ ಜೊತೆಗೆ ರೈತರಿಗೆ ಬೆಂಬಲ ಬೆಲೆ ನೀಡಿದ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ ಎಂದರು.
ಈ ಸಂದರ್ಭ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ನಾಡು ಸಿಎಸ್ಐ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ದ.ಕ. ಜಿಲ್ಲಾಧಿಕಾರಿ ಮುಲೈಮುಗಿಲನ್, ಸಹಾಯಕ ಆಯುಕ್ತ ಹರ್ಷವರ್ದನ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಮೂಲ್ಕಿ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಆರ್ಟಿಒ ಶ್ರೀಧರ್, ಸಿಡಿಪಿಒ ಶೈಲಾ, ಮಿಥುನ್ ರೈ ಮತ್ತಿತರರಿದ್ದರು. ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…