ಮೂಲ್ಕಿ: ಪಂಚ ಗ್ಯಾರಂಟಿಗಳಿಂದ ಬಡ ಜನರಿಗೆ ಹೆಚ್ಚಿನ ಪ್ರಯೋಜನವಾಗಿರುವ ಜೊತೆಗೆ ಹಣಕಾಸಿನ ಚಲಾವಣೆಯಿಂದಾಗಿ ರಾಜ್ಯ ಸರ್ಕಾರವು ಅತಿ ಹೆಚ್ಚು ಜಿಎಸ್ಟಿ ನೀಡುವ ಎರಡನೇ ರಾಜ್ಯವಾಗಿ ಪರಗಣಿಸಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಮೂಲ್ಕಿ ಗಾಂಧಿ ಮೈದಾನದಲ್ಲಿ ಮೂಲ್ಕಿ ತಾಲೂಕು ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.
ಗ್ಯಾರಂಟಿ ಸಮಾವೇಶವು ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮವಾಗಿದ್ದು ಆಡಳಿತ ಪಕ್ಷವು ಉತ್ತಮ ಆಡಳಿತವನ್ನು ನೀಡುವ ಕಾರ್ಯ ಮಾಡಬೇಕು.
ವಿಪಕ್ಷವು ಆಡಳಿತ ಪಕ್ಷದ ನ್ಯೂನತೆಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಬಡ ವರ್ಗಕ್ಕೆ ಸಹಕಾರ ನೀಡುವ ಜೊತೆಗೆ ರೈತರಿಗೆ ಬೆಂಬಲ ಬೆಲೆ ನೀಡಿದ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ ಎಂದರು.
ಈ ಸಂದರ್ಭ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ನಾಡು ಸಿಎಸ್ಐ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ದ.ಕ. ಜಿಲ್ಲಾಧಿಕಾರಿ ಮುಲೈಮುಗಿಲನ್, ಸಹಾಯಕ ಆಯುಕ್ತ ಹರ್ಷವರ್ದನ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಮೂಲ್ಕಿ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಆರ್ಟಿಒ ಶ್ರೀಧರ್, ಸಿಡಿಪಿಒ ಶೈಲಾ, ಮಿಥುನ್ ರೈ ಮತ್ತಿತರರಿದ್ದರು. ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…