ಗ್ಯಾಸ್‌ ಸಿಲಿಂಡರ್ ತುಂಬಿದ್ದ ಲಾರಿ ಸ್ಫೋಟ, ; ಚಾಲಕ ಸಜೀವ ದಹನ

ಉಡುಪಿ

ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿಯೊಂದು ಸಾಗರ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.

ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಸಾಗರದಿಂದ ಕಾರ್ಗಲ್‌ ಕಡೆಗೆ ಗ್ಯಾಸ್‌ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ  ಇಂಡಿಯನ್‌ ಗ್ಯಾಸ್‌ಗೆ ಸೇರಿದ ಲಾರಿ  ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡು  ಈ ಅವಘಡ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.