ಮಾಗಡಿ: ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಮೃತಪಟ್ಟಿದ್ದಾರೆ.
ಮೃತರನ್ನು ಶೋಭಾ (40) ಮತ್ತು ಅವರ ಪುತ್ರ ದಿಲೀಪ್ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ್ ಸ್ನಾನದ ಕೊಠಡಿಯಲ್ಲಿರುವ ಗೀಸರ್ ಸ್ವಿಚ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ್ದರು. ಆಗ, ಕಿಟಕಿ ಇಲ್ಲದ ಕೊಠಡಿಯನ್ನು ಆವರಿಸಿದ ಕಾರ್ಬನ್ ಮೊನಾಕ್ಸೈಡ್ ನಿಂದಾಗಿ ದಿಲೀಪ್ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ.
ಸ್ನಾನಕ್ಕೆ ಹೋದ ಮಗ ಎಷ್ಟೊತ್ತಾದರೂ ಬಂದಿಲ್ಲ ಎಂದು ತಾಯಿ ಶೋಭಾ ಅವರು, ಸ್ನಾನದ ಕೊಠಡಿ ಬಾಗಿಲು ತೆರೆದು ಒಳ ಹೋದಾಗ ಮಗ ಕೆಳಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಆತನ ಸ್ಥಿತಿ ಕಂಡು ಗಾಬರಿಗೊಂಡು ಅವರ, ಮಗನನ್ನು ಹೊರಕ್ಕೆ ಕರೆತರಲು ಯತ್ನಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಅವರು ಸಹ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಕೊನೆಯುಸಿರೆಳೆದಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…