ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ.
ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯಿಂದ ಚಾಂದಿನಿ ಪತಿ ಕಿರಣ್ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.
ಕಿರಣ್ ತಮ್ಮ ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ಗ್ಯಾಸ್ ಗೀಸರ್ ಸೋರಿಕೆಯಿಂದ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗೋವಿಂದ ರಾಜ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…