ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ.
ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯಿಂದ ಚಾಂದಿನಿ ಪತಿ ಕಿರಣ್ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.
ಕಿರಣ್ ತಮ್ಮ ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ಗ್ಯಾಸ್ ಗೀಸರ್ ಸೋರಿಕೆಯಿಂದ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗೋವಿಂದ ರಾಜ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…