ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ.
ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯಿಂದ ಚಾಂದಿನಿ ಪತಿ ಕಿರಣ್ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.
ಕಿರಣ್ ತಮ್ಮ ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ಗ್ಯಾಸ್ ಗೀಸರ್ ಸೋರಿಕೆಯಿಂದ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗೋವಿಂದ ರಾಜ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…