ಉಡುಪಿ

ಗ್ರಂಥಾಲಯಕ್ಕೆ ಹೋಗಲು ಹರಸಾಹಸದ ಕೆಲಸ!​​​​​​​!! ಉಡುಪಿ ಗ್ರಂಥಾಲಯ ಪ್ರವೇಶ ಬಾಗಿಲಲ್ಲೇ ನಗರಸಭಾ ಕಚೇರಿ…………

ಗ್ರಂಥಾಲಯ ಚೆನ್ನಾಗಿದ್ದು,ಓದುಗರ ಮನ ತಣಿಸಲು ಸಶಕ್ತವೆನಿಸುವಷ್ಟು ಪುಸ್ತಕ,ಪತ್ರಿಕೆಗಳ ಸಂಗ್ರಹವೂ ಇಲ್ಲಿದೆ. ಆದರೆ ಇಲ್ಲಿಗೆ ಪ್ರವೇಶದ್ದೇ ಸಮಸ್ಯೆ.

ಉಡುಪಿ: ಓದುಗರಿಗೆ ಬೇಕಾದಷ್ಟು ಪುಸ್ತಕ, ಪತ್ರಿಕೆಗಳು ಈ ಗ್ರಂಥಾಲಯದಲ್ಲಿದೆ. ಕಟ್ಟಡವೂ ಚೆನ್ನಾಗಿದೆ. ಆದರೆ ಈ ಗ್ರಂಥಾಲಯಕ್ಕೆ ಪ್ರವೇಶಿಸುವುದೇ ಪ್ರಯಾಸದ ಕೆಲಸ!

ನಗರದ ಕೆ.ಎಂ. ಮಾರ್ಗದಲ್ಲಿ ನಗರಸಭಾ ಕಚೇರಿ ಕಟ್ಟಡಕ್ಕೆ ಹೊಂದಿ ಕೊಂಡಂತೆ ಇರುವ ನಗರ ಕೇಂದ್ರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರವೇಶ ಬಾಗಿಲಲ್ಲೇ ನಗರಸಭೆಯ ತೆರಿಗೆ ಸ್ವೀಕಾರ ಕಚೇರಿ ಕಾರ್ಯ ನಿರ್ವಹಿಸುತ್ತಿರುವುದ ರಿಂದ ಗ್ರಂಥಾಲಯ ಪ್ರವೇಶಿಸುವವರಿಗೆ ಅಡ್ಡಿಯಾಗಿದೆ.

ಹಿರಿಯರ ಗೋಳು
ಲೈಬ್ರೆರಿ ಕಟ್ಟಡದಲ್ಲೇ ಹಿರಿಯ ನಾಗರಿಕರ ವಿಭಾಗವಿದೆ. ನಿತ್ಯ ಹಲವಾರು ಮಂದಿ ಹಿರಿಯ ನಾಗರಿಕರು ಇಲ್ಲಿಗೆ ಆಗಮಿಸುತ್ತಾರೆ. ವಾಹನ, ಜನ ಸಂದಣಿ ದಾಟಿಕೊಂಡು ಬರಲು ಅವರು ಹರಸಾಹಸ ಪಡಬೇಕಾಗಿದೆ. “ಮೆಟ್ಟಿಲು ಗಳನ್ನಾದರೂ ಏರಬಹುದು. ಆದರೆ ಜನ, ವಾಹನಗಳನ್ನು ದಾಟಿಕೊಂಡು ಬರುವುದು ಕಷ್ಟಸಾಧ್ಯ ವಾಗಿದೆ’ ಎನ್ನುತ್ತಾರೆ ಹಿರಿಯ ನಾಗರಿಕರಾಗಿರುವ ಜಗದೀಶ್‌ ಅವರು.

ಸ್ಪಂದನೆಯೇ ಇಲ್ಲ
ದಾರಿ ಸಮಸ್ಯೆ ಬಗ್ಗೆ ಈಗಾಗಲೇ ದೂರು ಕೊಟ್ಟಿದ್ದೇವೆ. ಆದರೆ ಅಧಿಕಾರಿಗಳು ಇದೊಂದು ಸಮಸ್ಯೆಯೇ ಅಲ್ಲ ಎಂಬಂತೆ ವರ್ತಿಸುತ್ತಾರೆ. ಇಲ್ಲಿನ ಮೆಟ್ಟಿಲುಗಳಲ್ಲಿಯೂ ಸಾಲಾಗಿ ಕುಳಿತು ಕೊಳ್ಳುವವರಿದ್ದಾರೆ. ಇಲ್ಲೇ ಉಗುಳುತ್ತಾರೆ. ಗ್ರಂಥಾಲಯವೆಂದರೆ ಇಷ್ಟೊಂದು ಅಸಡ್ಡೆ ಯಾಕೆ ಎಂಬುದು ಗ್ರಂಥಾಲಯದ ಬಳಕೆದಾರರಾದ ವಿಶಾಲಾಕ್ಷಿ ಅವರ ಪ್ರಶ್ನೆ.

ಕಚೇರಿ ಒಂದು,ಜನ ಹತ್ತಾರು
ಗ್ರಂಥಾಲಯ ಬಾಗಿಲಿನ ಎದುರಲ್ಲಿಯೇ ನಡೆದಾಡಲೂ ಜಾಗವನ್ನು ಬಿಡದೆ  2 ಮೇಜು, ಮೂರು-ನಾಲ್ಕು ಕುರ್ಚಿ ಹಾಕಿ ಕಚೇರಿ ಮಾಡಲಾಗಿದೆ. ಸಿಬಂದಿ, ಸಾರ್ವಜನಿಕರೆಲ್ಲ ಸೇರಿದಾಗ ದಾರಿ ಅಕ್ಷರಶಃ ಮುಚ್ಚಿಯೇ ಹೋಗುತ್ತದೆ. ಇದರ ಜತೆಗೆ ವಾಹನ ಪಾರ್ಕಿಂಗ್‌ ಭರಾಟೆ. ನಗರಸಭೆ ಕಟ್ಟಡದಲ್ಲಿ, ಹೊರಗಡೆ ಸ್ಥಳಾವಕಾಶ ಸಾಕಾಗದೇ ಇರುವುದರಿಂದ  ವಾಹನಗಳನ್ನು ಕೂಡ ಲೈಬ್ರೆರಿ ದ್ವಾರದಲ್ಲಿಯೇ ಪಾರ್ಕಿಂಗ್‌ ಮಾಡಲಾಗುತ್ತದೆ. ಇವುಗಳ ಮಧ್ಯೆ ನುಸುಳಿ ಗ್ರಂಥಾಲಯ ಪ್ರವೇಶಿಸಬೇಕಾದ ಅನಿವಾರ್ಯ ಇಲ್ಲಿನದು.

ಭದ್ರತೆ,ಸ್ವಚ್ಛತೆಗೆ ಗಮನ
ಸಮಸ್ಯೆ ಗಮನಕ್ಕೆ ಬಂದಿದ್ದು, ಅಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ಆದರೆ ಪ್ರಯೋ ಜನವಾಗಿಲ್ಲ. ಮತ್ತೂಮ್ಮೆ ಆಯುಕ್ತರು ಮತ್ತು ನಗರಸಭೆ ಅಧ್ಯಕ್ಷರ ಜತೆಗೆ ಮಾತ ನಾಡುತ್ತೇನೆ. ಇಲ್ಲಿ  ಭದ್ರತಾ ವ್ಯವಸ್ಥೆ, ಸ್ವಚ್ಛತೆ ಕಾಪಾಡಲು ವ್ಯವಸ್ಥೆ ಆಗಬೇಕಾಗಿದೆ.
– ವಸಂತಿ ಶೆಟ್ಟಿ, ನಗರಸಭಾ ಸದಸ್ಯರು, ಗ್ರಂಥಾಲಯ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು 

ಗ್ರಂಥಾಲಯ ಪ್ರವೇಶ ಕಷ್ಟ
ಬೆಳಗ್ಗೆ ಹೊತ್ತು ಹೆಚ್ಚು ಜನ ಇರುತ್ತಾರೆ. ಆಗ ಗ್ರಂಥಾಲಯ ಪ್ರವೇಶಿಸುವುದೇ ಕಷ್ಟ. ಒಂದೋ  ಗ್ರಂಥಾಲಯವನ್ನು ಸ್ಥಳಾಂತರಿಸಲಿ, ಇಲ್ಲವೇ ಆ ಕಚೇರಿ ಸ್ಥಳಾಂತರಿಸಲಿ. ಗ್ರಂಥಾಲಯದ ಪ್ರಾಮುಖ್ಯವನ್ನು ಕೂಡ ಅಧಿಕಾರಿಗಳು ಅರಿತುಕೊಳ್ಳಬೇಕು.
– ರೇಣುಕಾ, ವಿದ್ಯಾರ್ಥಿನಿ 

 

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago