ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ’ : ನಳಿನ್ ಕುಮಾರ್ ಕಟೀಲ್ -Vishwanews24

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ’ : ನಳಿನ್ ಕುಮಾರ್ ಕಟೀಲ್ -Vishwanews24

ಬೆಂಗಳೂರು, : ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 80 ಪ್ರತಿಶತಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮುಂಬರುವ ಚುನಾವಣೆಗೆ ಸಿದ್ಧತೆಗಳನ್ನು ಮಾಡುವ ನಿಟ್ಟಿನಲ್ಲಿ ಸೋಮವಾರ ನಗರದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, “ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲು ಪಕ್ಷವು ಪ್ರಸ್ತಾಪಿಸಿದೆ” ಎಂದರು.

ಇನ್ನು “ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಜಾತಿಯ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಪಕ್ಷ ಅವಕಾಶ ನೀಡುತ್ತದೆ. ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಪಕ್ಷವು ರಾಜ್ಯ ಮಟ್ಟದ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ನಳಿನ್ ಕುಮಾರ್ ಕಟೀಲ್, ಕೆ.ಎಸ್.ಈಶ್ವರಪ್ಪ, ಗೋವಿಂದ್ ಕಾರಜೋಳ, ಲಕ್ಷ್ಮಣ ಸವದಿ ಮತ್ತು ಆರ್ ಅಶೋಕ್ ನೇತೃತ್ವ ವಹಿಸಲಿದ್ದಾರೆ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಲು ಅದು ಕೂಡ ಪಕ್ಷಕ್ಕೆ ಸಹಾಯ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಉಪ ಮುಖ್ಯಮಂತ್ರಿಗಳಾದ ಅಶ್ವತ ನಾರಾಯಣ್ ಮತ್ತು ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಮತ್ತು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಉಪಸ್ಥಿತರಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago