ಬೆಂಗಳೂರು, : ”ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ” ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ. ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ” ಎಂದು ತಿಳಿಸಿದ್ದಾರೆ.
”ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ” ಎಂದು ಹೇಳಿದ್ದಾರೆ.
”ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ. ಜೆಡಿಎಸ್ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ” ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…