Featured

ಗ್ರಾಮ ಪಂಚಾಯಿತಿ ಚುನಾವಣೆ : ಉಡುಪಿ ಮಂಗಳೂರಿನಲ್ಲಿ ಮೊದಲ ಹಂತದ ಮತದಾನ -Vishwanews24

ಗ್ರಾಮ ಪಂಚಾಯಿತಿ ಚುನಾವಣೆ : ಉಡುಪಿ ಮಂಗಳೂರಿನಲ್ಲಿ ಮೊದಲ ಹಂತದ ಮತದಾನ -Vishwanews24

ಮಂಗಳೂರು / ಉಡುಪಿ,: ಬಂಟ್ವಾಳ, ಮೂಡುಬಿದ್ರೆ ಮತ್ತು ಮಂಗಳೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 22 ರಂದು ಮೊದಲ ಹಂತದ ಚುನಾವಣೆ ಪ್ರಾರಂಭವಾಗಿದ್ದು, ಉಡುಪಿ, ಹೆಬ್ರಿ, ಬ್ರಹ್ಮಾವರ ಮತ್ತು ಬೈಂದೂರಿನಲ್ಲೂ ಮತದಾನ ಪ್ರಗತಿಯಲ್ಲಿದೆ.

ಬೆಳಿಗ್ಗೆ 9 ಗಂಟೆಗೆ ತಾಲ್ಲೂಕುವಾರು ಮತದಾನದ ಶೇಕಡಾವಾರು ಪ್ರಮಾಣ ಮಂಗಳೂರು 14.6%, ಮೂಡುಬಿದ್ರೆ 15.64%, ಮತ್ತು ಬಂಟ್ವಾಳ 13.75% ಒಟ್ಟು 14.48%, ಉಡುಪಿ 15.87%, ಹೆಬ್ರಿ 15.47%, ಬ್ರಹ್ಮಾವರ 16.49% ಮತ್ತು ಬೈಂದೂರು 11.49% ಒಟ್ಟು 14.37% ಆಗಿದೆ.

ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದಲ್ಲಿ ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ 106 ಗ್ರಾಮ ಪಂಚಾಯಿತಿಗಳು ಚುನಾವಣೆಯನ್ನು ಎದುರಿಸುತ್ತಿವೆ. 106 ಗ್ರಾಮ ಪಂಚಾಯಿತಿಗಳಲ್ಲಿ ವ್ಯಾಪಿಸಿರುವ ಒಟ್ಟು 1,631 ಕ್ಷೇತ್ರಗಳು ಚುನಾವಣೆಯನ್ನು ಎದುರಿಸುತ್ತಿವೆ.

ಒಟ್ಟು 1,681 ಕ್ಷೇತ್ರಗಳಲ್ಲಿ 1,631 ಮತದಾನ ನಡೆಯಲಿದ್ದು, 50 ಮಂದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 3,845 ಅಭ್ಯರ್ಥಿಗಳ ಭವಿಷ್ಯವನ್ನು ಮಂಗಳವಾರ ಮತಪೆಟ್ಟಿಗೆಗಳಲ್ಲಿ ಮುಚ್ಚಲಾಗುವುದು. ಸಂಜೆ 5 ರವರೆಗೆ ಮತದಾನ ನಡೆಯಲಿದೆ.

ಸ್ಯಾನಿಟೈಸರ್ ಬಳಸಿ, ಮಾಸ್ಕ್‌ ಧರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮತದಾರರು ಮತ ಚಲಾಯಿಸುತ್ತಿದ್ದಾರೆ. ಆಶಾ ಕಾರ್ಯಕರ್ತರು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಮತದಾರರಿಗೆ ಬೂತ್‌ಗಳಿಗೆ ಪ್ರವೇಶ ನೀಡುತ್ತಿದ್ದಾರೆ.

ಜಿಲ್ಲೆಯ ತಲಪಾಡಿಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 246 ಎ ಯಲ್ಲಿ 829 ಮತದಾರರಲ್ಲಿ 140 ಮಂದಿ ಬೆಳಿಗ್ಗೆ 9.30 ರ ವೇಳೆಗೆ ಮತ ಚಲಾಯಿಸಿದ್ದಾರೆ. 247 ರ ಮತದಾನ ಕೇಂದ್ರದಲ್ಲಿ 754 ರಲ್ಲಿ 162 ಮಂದಿ ಮತ ಚಲಾಯಿಸಿದ್ದು, ಶೇಕಡಾ 21 ರಷ್ಟು ಮತದಾನವಾಗಿದೆ.

ಬಂಟ್ವಾಳ ತಾಲ್ಲೂಕಿಗೆ ಸಂಬಂಧಿಸಿದ ಪಂಚಾಯತ್ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ದೈವಿಕ ಬೆಂಬಲ ಕೋರಿ, ಮಾಜಿ ಸಚಿವ ಬಿ ರಾಮನಾಥ್ ರೈ, ಬಂಟ್ವಾಳ ವೆಂಕಟರಮಣ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಅರ್ಪಿಸಿದರು. ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈ.ಲಿ ನಿಗಮದ ಅಧ್ಯಕ್ಷ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಪಾನೇಲ ಬರಿಕೆ ಶಾಲೆಯಲ್ಲಿ ಮತ ಚಲಾಯಿಸಿದರು.

ಬೋಳಿಯಾರು ರಂತಡ್ಕ ಶಾಲೆಯಲ್ಲಿ ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಸರತಿ ಸಾಲಿನಲ್ಲಿ ನಿಂತು ಮತದಾನ ನಡೆಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago