ಕುಂದಾಪುರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅಭೂತಪೂರ್ವ ಗೆಲುವು ಸಿಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಗ್ರಾ.ಪಂ ಚುನಾವಣೆ ಹಿನ್ನೆಲೆ ಬೈಂದೂರಿನಲ್ಲಿ ಸೋಮವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಇದು ಗ್ರಾಮ ಸರ್ಕಾರವನ್ನು ಆಯ್ಕೆ ಮಾಡುವ ಚುನಾವಣೆ ಯಾಗಿದ್ದುಪಂಚಾಯತ್ ರಾಜ್ ವ್ಯವಸ್ಥೆ ಆಳಿಸಿಕೊಳ್ಳುವವರ ಆಡಳಿತವಾಗಿದೆ. ಆಳಿಸಿಕೊಳ್ಳುವವರ ಆಡಳಿತದಲ್ಲಿ ಬಿಜೆಪಿ ಮಹತ್ತರವಾದ ಗೆಲುವು ಸಾಧಿಸಲಿದೆ ಎಂದರು.
ರಾಜ್ಯದಲ್ಲಿ 6020 ಗ್ರಾ.ಪಂ ನಲ್ಲಿ ಚುನಾವಣೆ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ 154 ಗ್ರಾ.ಪಂ ನಲ್ಲಿ ಚುನಾವಣೆ ನಡೆಯಲಿದೆ. ಬೈಂದೂರು ವಿಧಾನಸಭಾ ವ್ಯಾಪ್ತಿಯ 39 ಪಂಚಾಯತ್ ನಲ್ಲೂ ಬಿಜೆಪಿ ಮೇಲುಗೈ ಸಾಧಿಸುವ ವಾತಾವರಣವಿದೆ. 39 ಪಂಚಾಯತ್ ನಲ್ಲಿ ನೂರಕ್ಕೆ ನೂರು ಬಿಜೆಪಿ ಬೆಂಬಲಿತರು ಅಧಿಕಾರ ಹಿಡಿಯುತ್ತಾರೆ. ಖಂಡಿತವಾಗಿಯೂ ಗ್ರಾಮ ಮಟ್ಟದಲ್ಲಿ ಪಾರದರ್ಶಕ ಆಡಳಿತವನ್ನು ಕೊಡುತ್ತೇವೆ ಆದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಕೈ ಹಿಡಿಯಲು ಮತದಾರರಿಗೆ ಸಚಿವ ಕೋಟ ಮನವಿ ಮಾಡಿದರು.
ಬಿಜೆಪಿ ಪಕ್ಷದೊಂದಿಗೆ ಜೆಡಿಎಸ್ ವಿಲೀನ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೋಟ ಇದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು. ಈ ಬಗ್ಗೆ ಹಿರಿಯ ಮುಖಂಡರು ಈ ಬಗ್ಗೆ ತೀರ್ಮಾನಿಸುತ್ತಾರೆ, ಮಾಧ್ಯಮಗಳಲ್ಲಿ ಬರುತ್ತಿರುವುದನ್ನು ಗಮನಿಸಿದ್ದೇನೆ, ಈ ವಿಚಾರವಾಗಿ ನನಗೇನು ಗೊತ್ತಿಲ್ಲ ಎಂದರು.
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…