Featured

ಗ್ರಾ. ಪಂ. ಚುನಾವಣೆಯಲ್ಲಿಬಿಜೆಪಿ ಮಹತ್ತರವಾದ ಗೆಲುವು ಸಾಧಿಸಲಿದೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಗ್ರಾ. ಪಂ. ಚುನಾವಣೆಯಲ್ಲಿಬಿಜೆಪಿ ಮಹತ್ತರವಾದ ಗೆಲುವು ಸಾಧಿಸಲಿದೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಕುಂದಾಪುರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅಭೂತಪೂರ್ವ ಗೆಲುವು ಸಿಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಗ್ರಾ.ಪಂ ಚುನಾವಣೆ ಹಿನ್ನೆಲೆ ಬೈಂದೂರಿನಲ್ಲಿ ಸೋಮವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಇದು ಗ್ರಾಮ ಸರ್ಕಾರವನ್ನು ಆಯ್ಕೆ ಮಾಡುವ ಚುನಾವಣೆ ಯಾಗಿದ್ದುಪಂಚಾಯತ್ ರಾಜ್ ವ್ಯವಸ್ಥೆ ಆಳಿಸಿಕೊಳ್ಳುವವರ ಆಡಳಿತವಾಗಿದೆ. ಆಳಿಸಿಕೊಳ್ಳುವವರ ಆಡಳಿತದಲ್ಲಿ ಬಿಜೆಪಿ ಮಹತ್ತರವಾದ ಗೆಲುವು ಸಾಧಿಸಲಿದೆ ಎಂದರು.

ರಾಜ್ಯದಲ್ಲಿ 6020 ಗ್ರಾ.ಪಂ ನಲ್ಲಿ ಚುನಾವಣೆ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ 154 ಗ್ರಾ.ಪಂ ನಲ್ಲಿ ಚುನಾವಣೆ ನಡೆಯಲಿದೆ. ಬೈಂದೂರು ವಿಧಾನಸಭಾ ವ್ಯಾಪ್ತಿಯ 39 ಪಂಚಾಯತ್ ನಲ್ಲೂ ಬಿಜೆಪಿ ಮೇಲುಗೈ ಸಾಧಿಸುವ ವಾತಾವರಣವಿದೆ. 39 ಪಂಚಾಯತ್ ನಲ್ಲಿ ನೂರಕ್ಕೆ ನೂರು ಬಿಜೆಪಿ ಬೆಂಬಲಿತರು ಅಧಿಕಾರ ಹಿಡಿಯುತ್ತಾರೆ. ಖಂಡಿತವಾಗಿಯೂ ಗ್ರಾಮ ಮಟ್ಟದಲ್ಲಿ ಪಾರದರ್ಶಕ ಆಡಳಿತವನ್ನು ಕೊಡುತ್ತೇವೆ ಆದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಕೈ ಹಿಡಿಯಲು ಮತದಾರರಿಗೆ ಸಚಿವ ಕೋಟ ಮನವಿ ಮಾಡಿದರು.

ಬಿಜೆಪಿ ಪಕ್ಷದೊಂದಿಗೆ ಜೆಡಿಎಸ್ ವಿಲೀನ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೋಟ ಇದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು. ಈ ಬಗ್ಗೆ ಹಿರಿಯ ಮುಖಂಡರು ಈ ಬಗ್ಗೆ ತೀರ್ಮಾನಿಸುತ್ತಾರೆ, ಮಾಧ್ಯಮಗಳಲ್ಲಿ ಬರುತ್ತಿರುವುದನ್ನು ಗಮನಿಸಿದ್ದೇನೆ, ಈ ವಿಚಾರವಾಗಿ ನನಗೇನು ಗೊತ್ತಿಲ್ಲ ಎಂದರು.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

52 minutes ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

1 hour ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

1 hour ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

2 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

3 hours ago