ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಪಕ್ಷದ ಈ ಹಿಂದಿನ ಇತಿಹಾಸವನ್ನು ಮರುಕಳಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ತೊಡಗಿಸಿಕೊಳ್ಳಬೇಕು.
ಸಾರ್ವಜನಿಕರೊಂದಿಗೆ ಸ್ಪಂದಿಸುವ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಗ್ರಾಮ ಪಂಚಾಯತ್ ಚುನಾವಣೆ ತಳಮಟ್ಟದಲ್ಲಿ ಪಕ್ಷವನ್ನು ಬೆಳೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಗಾಗಿ ಜಿಲ್ಲಾ ಕಾಂಗ್ರಸ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ ದ ಆಶಯಗಳನ್ನು ಸಾಕಾರಗೊಳಿಸುವಲ್ಲಿ ಗ್ರಾಮ ಪಂಚಾಯತ್ಗಳು ಪ್ರಧಾನ ಭೂಮಿಕೆ ವಹಿಸುತ್ತವೆ ಈ ನಿಟ್ಟಿನಲ್ಲಿ ಗರಿಷ್ಟ ಸ್ಥಾನಗಳನ್ನು ಗೆಲ್ಲುವುದು ಪಕ್ಷದ ಗುರಿಯಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವ್ಯಾಪ್ತಿಗೆ ಬರುವ 5 ಬ್ಲಾಕ್ಗಳಿಗೆ ಜಿಲ್ಲಾ ಕಾಂಗ್ರೆಸ್ನಿಂದ ಬ್ಲಾಕ್ಗಳಿಗೆ 3 ಜನರಂತೆ ಉಸ್ತುವಾರಿಗಳನ್ನು ನೇಮಕ ಮಾಡಲಾಗುವುದು. ಅವರು ಬ್ಲಾಕ್ನಿಂದ ನಿಯುಕ್ತಿಗೊಂಡ ಉಸ್ತುವಾರಿಗಳೊಂದಿಗೆ ಕೂಡಿಕೊಂಡು ಅಭ್ಯರ್ಥಿಯ ಆಯ್ಕೆ, ಸಮಸ್ಯೆಗಳ ಪರಿಹಾರ ಹಾಗೂ ಸ್ಥಳೀಯವಾಗಿ ಚುನಾವಣಾ ಪ್ರಚಾರದ ರಣನೀತಿ ರೂಪಿಸಿಕೊಳ್ಳಬೇಕಾಗಿದೆ ಎಂದರು.
ಸಭೆಯಲ್ಲಿ ದಿನೇಶ್ ಪುತ್ರನ್, ವೆರೋನಿಕಾ ಕರ್ನೇಲಿಯೋ, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ನೀರೆ ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಮುರಳಿ ಶೆಟ್ಟಿ, ಜ್ಯೋತಿ ಹೆಬ್ಬಾರ್, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಹಬೀಬ್ ಅಲಿ, ವಿಶ್ವಾಸ್ ಅಮೀನ್, ಸತೀಶ್ ಅಮೀನ್ ಪಡುಕೆರೆ, ಹರೀಶ್ ಶೆಟ್ಟಿ ಪಾಂಗಾಳ, ಡಾ. ಸುನೀತಾ ಶೆಟ್ಟಿ, ರೋಶನಿ ಒಲಿವರ್, ಉಪೇಂದ್ರ ಮೆಂಡನ್, ಲಕ್ಷಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ ಸ್ವಾಗತಿಸಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…