ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ ಕಾನೂನಿನ ಅನ್ವಯ, ಈ ನಾಲ್ವರ ಹೆಸರುಗಳನ್ನು ಭಾರತ ಸರ್ಕಾರ ಸೇರ್ಪಡೆ ಮಾಡಿದೆ. ತಿದ್ದುಪಡಿ ಕಾಯ್ದೆ ಜಾರಿಯಾದ ಒಂದು ತಿಂಗಳ ಬಳಿಕ ಭಾರತ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
1967ರ ಮೂಲ ಕಾನೂನಿನಲ್ಲಿ ವೈಯಕ್ತಿಕವಾಗಿ ಯಾರನ್ನೂ ಉಗ್ರರು ಎಂದು ಘೋಷಿಸಲು ಸಾಧ್ಯವಿರಲಿಲ್ಲ. ಗುಂಪು ಅಥವಾ ಸಂಘಟನೆಯನ್ನು ಮಾತ್ರ ಉಗ್ರರೆಂದು ಘೋಷಿಸಬಹುದಿತ್ತು. ಇದೀಗ ಸರ್ಕಾರ ಈ ನಾಲ್ವರನ್ನೂ ‘ವೈಯಕ್ತಿಕ ಘೋಷಿತ ಉಗ್ರ’ರು ಎಂದು ಘೋಷಿಸಿರುವುದರಿಂದ ‘ರೆಡ್ ಕಾರ್ನರ್’ ನೊಟೀಸ್ ಹೊರಡಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರರನ್ನು ಈ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತದ ನಿರ್ಧಾರಕ್ಕೆ ಅಮೆರಿಕ ಪ್ರಶಂಸೆ
ಭಾರತದ ದಿಟ್ಟ ಕ್ರಮದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾದ ದಕ್ಷಿಣ ಮತ್ತು ಕೇಂದ್ರೀಯ ಏಷ್ಯಾ ಭಾಗದ ಪ್ರಧಾನ ಸಹಾಯಕ ಕಾರ್ಯದರ್ಶಿ ಆಲಿಸ್ ಜಿ.ವೆಲ್ಸ್ ಅವರು, ಭಾರತದ ನೂತನ ಭಯೋತ್ಪಾದನಾ ತಡೆ ಕಾಯ್ದೆ ಹಾಗೂ ಪಟ್ಟಿಯಲ್ಲಿ ನಾಲ್ವರು ಉಗ್ರರ ಸೇರ್ಪಡೆಗೊಳಿಸಿರುವುದನ್ನು ಅಮೆರಿಕಾ ಬೆಂಬಲಿಸುತ್ತದೆ ಹಾಗೂ ಅದನ್ನು ಪ್ರಶಂಸಿಸುತ್ತದೆ. ಭಾರತದ ಈ ಹೊಸ ಕಾನೂನು ಉಗ್ರರನ್ನು ಮಟ್ಟಹಾಕಲು ಭಾರತ ಹಾಗೂ ಅಮೆರಿಕಾ ನಡೆಸುತ್ತಿರುವ ಜಂಟಿ ಕಾರ್ಯಾಚರಣೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…