ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ ಕಾನೂನಿನ ಅನ್ವಯ, ಈ ನಾಲ್ವರ ಹೆಸರುಗಳನ್ನು ಭಾರತ ಸರ್ಕಾರ ಸೇರ್ಪಡೆ ಮಾಡಿದೆ. ತಿದ್ದುಪಡಿ ಕಾಯ್ದೆ ಜಾರಿಯಾದ ಒಂದು ತಿಂಗಳ ಬಳಿಕ ಭಾರತ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
1967ರ ಮೂಲ ಕಾನೂನಿನಲ್ಲಿ ವೈಯಕ್ತಿಕವಾಗಿ ಯಾರನ್ನೂ ಉಗ್ರರು ಎಂದು ಘೋಷಿಸಲು ಸಾಧ್ಯವಿರಲಿಲ್ಲ. ಗುಂಪು ಅಥವಾ ಸಂಘಟನೆಯನ್ನು ಮಾತ್ರ ಉಗ್ರರೆಂದು ಘೋಷಿಸಬಹುದಿತ್ತು. ಇದೀಗ ಸರ್ಕಾರ ಈ ನಾಲ್ವರನ್ನೂ ‘ವೈಯಕ್ತಿಕ ಘೋಷಿತ ಉಗ್ರ’ರು ಎಂದು ಘೋಷಿಸಿರುವುದರಿಂದ ‘ರೆಡ್ ಕಾರ್ನರ್’ ನೊಟೀಸ್ ಹೊರಡಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರರನ್ನು ಈ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತದ ನಿರ್ಧಾರಕ್ಕೆ ಅಮೆರಿಕ ಪ್ರಶಂಸೆ
ಭಾರತದ ದಿಟ್ಟ ಕ್ರಮದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾದ ದಕ್ಷಿಣ ಮತ್ತು ಕೇಂದ್ರೀಯ ಏಷ್ಯಾ ಭಾಗದ ಪ್ರಧಾನ ಸಹಾಯಕ ಕಾರ್ಯದರ್ಶಿ ಆಲಿಸ್ ಜಿ.ವೆಲ್ಸ್ ಅವರು, ಭಾರತದ ನೂತನ ಭಯೋತ್ಪಾದನಾ ತಡೆ ಕಾಯ್ದೆ ಹಾಗೂ ಪಟ್ಟಿಯಲ್ಲಿ ನಾಲ್ವರು ಉಗ್ರರ ಸೇರ್ಪಡೆಗೊಳಿಸಿರುವುದನ್ನು ಅಮೆರಿಕಾ ಬೆಂಬಲಿಸುತ್ತದೆ ಹಾಗೂ ಅದನ್ನು ಪ್ರಶಂಸಿಸುತ್ತದೆ. ಭಾರತದ ಈ ಹೊಸ ಕಾನೂನು ಉಗ್ರರನ್ನು ಮಟ್ಟಹಾಕಲು ಭಾರತ ಹಾಗೂ ಅಮೆರಿಕಾ ನಡೆಸುತ್ತಿರುವ ಜಂಟಿ ಕಾರ್ಯಾಚರಣೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…