ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ ಕಾನೂನಿನ ಅನ್ವಯ, ಈ ನಾಲ್ವರ ಹೆಸರುಗಳನ್ನು ಭಾರತ ಸರ್ಕಾರ ಸೇರ್ಪಡೆ ಮಾಡಿದೆ. ತಿದ್ದುಪಡಿ ಕಾಯ್ದೆ ಜಾರಿಯಾದ ಒಂದು ತಿಂಗಳ ಬಳಿಕ ಭಾರತ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
1967ರ ಮೂಲ ಕಾನೂನಿನಲ್ಲಿ ವೈಯಕ್ತಿಕವಾಗಿ ಯಾರನ್ನೂ ಉಗ್ರರು ಎಂದು ಘೋಷಿಸಲು ಸಾಧ್ಯವಿರಲಿಲ್ಲ. ಗುಂಪು ಅಥವಾ ಸಂಘಟನೆಯನ್ನು ಮಾತ್ರ ಉಗ್ರರೆಂದು ಘೋಷಿಸಬಹುದಿತ್ತು. ಇದೀಗ ಸರ್ಕಾರ ಈ ನಾಲ್ವರನ್ನೂ ‘ವೈಯಕ್ತಿಕ ಘೋಷಿತ ಉಗ್ರ’ರು ಎಂದು ಘೋಷಿಸಿರುವುದರಿಂದ ‘ರೆಡ್ ಕಾರ್ನರ್’ ನೊಟೀಸ್ ಹೊರಡಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರರನ್ನು ಈ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತದ ನಿರ್ಧಾರಕ್ಕೆ ಅಮೆರಿಕ ಪ್ರಶಂಸೆ
ಭಾರತದ ದಿಟ್ಟ ಕ್ರಮದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾದ ದಕ್ಷಿಣ ಮತ್ತು ಕೇಂದ್ರೀಯ ಏಷ್ಯಾ ಭಾಗದ ಪ್ರಧಾನ ಸಹಾಯಕ ಕಾರ್ಯದರ್ಶಿ ಆಲಿಸ್ ಜಿ.ವೆಲ್ಸ್ ಅವರು, ಭಾರತದ ನೂತನ ಭಯೋತ್ಪಾದನಾ ತಡೆ ಕಾಯ್ದೆ ಹಾಗೂ ಪಟ್ಟಿಯಲ್ಲಿ ನಾಲ್ವರು ಉಗ್ರರ ಸೇರ್ಪಡೆಗೊಳಿಸಿರುವುದನ್ನು ಅಮೆರಿಕಾ ಬೆಂಬಲಿಸುತ್ತದೆ ಹಾಗೂ ಅದನ್ನು ಪ್ರಶಂಸಿಸುತ್ತದೆ. ಭಾರತದ ಈ ಹೊಸ ಕಾನೂನು ಉಗ್ರರನ್ನು ಮಟ್ಟಹಾಕಲು ಭಾರತ ಹಾಗೂ ಅಮೆರಿಕಾ ನಡೆಸುತ್ತಿರುವ ಜಂಟಿ ಕಾರ್ಯಾಚರಣೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…