ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡ ಮಾರುತ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಗ್ನೇಯ ಅರಬಿ ಸಮುದ್ರ ಮತ್ತು ಹಿಂದೂ ಮಹಾಸಾಗರ ನಡುವಿನ ಸಮಭಾಜಕದ ಬಳಿ ಸಮುದ್ರ ಮಟ್ಟದಿಂದ 3.1 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಪರಿಣಾಮ ಗಾಳಿಯಿಂದಾಗಿ ಮೋಡಗಳ ಚಲನೆ ಹೆಚ್ಚಾಗಿ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಚಂಡಮಾರುತದ ಪರಿಣಾಮದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಡಿಸೆಂಬರ್ 8 ರ ಮಂಗಳವಾರ ಸಂಜೆ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಿದೆ.
ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಮೂಡುಬಿದಿರೆ, ಉಡುಪಿ, ಕಾರ್ಕಳ, ಹೆಬ್ರಿ ಮತ್ತು ಪಡುಬಿದ್ರಿಗಳಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಎನ್ಡಿಎಂಸಿ) ನ ಮಾಹಿತಿ ಪ್ರಕಾರ ಮೂಡುಬಿದಿರೆಯಲ್ಲಿ 69.5 ಮಿ.ಮೀ ಮಳೆ ಸುರಿದ್ದು ಇದು ಮಂಗಳವಾರ ಸುರಿದ ಅತಿ ಹೆಚ್ಚು ಪ್ರಮಾಣದ ಮಳೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…