ನವದೆಹಲಿ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಆಗಿದ್ದಾಗ ನಿರ್ಮಿಸಿದ್ದ ಸರ್ಕಾರಿ ಕಟ್ಟದ ಧ್ವಂಸಕ್ಕೆ ಸಿಎಂ ಜಗನ್ ಆದೇಶ ಹೊರಡಿಸಿದ್ಧಾರೆ. ಕೃಷ್ಣಾ ನದಿ ತೀರ ಸಮೀಪದ “ಪ್ರಜಾ ವೇದಿಕೆ” ಸರ್ಕಾರಿ ಕಟ್ಟಡವನ್ನು ಒಡೆದು ಹಾಕುವಂತೆ ಸೂಚಿಸಿದ್ದಾರೆ.
ಸಾರ್ವಜನಿಕರ ಸಭೆ ನಡೆಸುವ ಉದ್ದೇಶದಿಂದಾಗಿ ಪ್ರಜಾ ವೇದಿಕೆ ಕಟ್ಟಡ ನಿರ್ಮಿಸಲಾಗಿತ್ತು. ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರೇ ತಮ್ಮ ಮನೆಯ ಸಮೀಪ ಇದನ್ನು ನಿರ್ಮಿಸಿದ್ದರು. 2017ರಲ್ಲಿ ಟಿಡಿಪಿ ಸರ್ಕಾರ ಎಂಟು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಿಸಿತ್ತು.
ಪ್ರಜಾ ವೇದಿಕಾ ಹೆಸರಿನ ಈ ಕಟ್ಟಡವು ನಾಯ್ಡು ಅವರ ನಿವಾಸದ ಸಮೀಪವೇ ಇದೆ. 2017ರಲ್ಲಿ ತೆಲುಗು ದೇಶಂ ಪಕ್ಷ(ಟಿಡಿಪಿ)ಸರಕಾರ ಕಟ್ಟಿರುವ ಈ ಕಟ್ಟಡ ಅಕ್ರಮವಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ. 5 ಕೋ.ರೂ. ಯೋಜನೆಯು ಅಂತಿಮವಾಗಿ 8 ಕೋ.ರೂ.ಗೆ ಏರಿಕೆಯಾಗಿತ್ತು.
ರೆಡ್ಡಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪ್ರಜಾ ವೇದಿಕಾ ಕಟ್ಟಡವನ್ನು ಧ್ವಂಸಗೊಳಿಸುವುದಾಗಿ ಘೋಷಿಸಿದ್ದರು.
ಪ್ರಜಾ ವೇದಿಕಾ ಕಟ್ಟಡವನು ಧ್ವಂಸಗೊಳಿಸದಂತೆ ಸಿಎಂ ರೆಡ್ಡಿಗೆ ಈ ಮೊದಲೇ ವಿನಂತಿಸಿರುವ ಟಿಡಿಪಿ ಮುಖ್ಯಸ್ಥ ನಾಯ್ಡು, ರಾಜ್ಯ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕನಾಗಿ ಈ ಕಟ್ಟಡದಲ್ಲೇ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ವಿನಂತಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…