Featured

ಚಂದ್ರಯಾನ-3 – ರಾಜ್ಯದ ಎಲ್ಲಾ ಶಾಲೆಗಳಲ್ಲೂ ಲ್ಯಾಂಡಿಂಗ್‌ ನೇರ ಪ್ರಸಾರ: ಯೋಗಿ ಆದಿತ್ಯನಾಥ್‌  – Vishwanews24

ಚಂದ್ರಯಾನ-3 – ರಾಜ್ಯದ ಎಲ್ಲಾ ಶಾಲೆಗಳಲ್ಲೂ ಲ್ಯಾಂಡಿಂಗ್‌ ನೇರ ಪ್ರಸಾರ: ಯೋಗಿ ಆದಿತ್ಯನಾಥ್‌

ಲಕ್ನೋ: ಚಂದ್ರಯಾನ-3  ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಮೇಲೆ ಲ್ಯಾಂಡ್‌ ಆಗುವ ದೃಶ್ಯವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ನೇರ ಪ್ರಸಾರ ವೀಕ್ಷಣೆಗೆ ನಾಳೆ ಶಾಲೆಗಳು ಸಂಜೆ ಒಂದು ಗಂಟೆ ವಿಶೇಷವಾಗಿ ತೆರೆದಿರುತ್ತವೆ. ಆಗಸ್ಟ್ 23 ರಂದು ಸಂಜೆ 5:27 ಕ್ಕೆ ಚಂದ್ರಯಾನ-3 ಚಂದ್ರನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಇಸ್ರೋ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಡಿಡಿ ನ್ಯಾಷನಲ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಹೇಳಿದೆ. ಹೀಗಾಗಿ ಅಂದು ಸಂಜೆ 5:15 ರಿಂದ 6:15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಸಭೆಗಳನ್ನು ಆಯೋಜಿಸುವ ಮೂಲಕ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ಉಲ್ಲೇಖಿಸಿ ಸಿಎಂ ಹೇಳಿದ್ದಾರೆ.

ಬುಧವಾರ ಸಂಜೆ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ತನ್ನ ಹೊಟ್ಟೆಯಲ್ಲಿರುವ ಪ್ರಗ್ಯಾನ್ ರೋವರ್‌ನೊಂದಿಗೆ ಚಂದ್ರನ ಮೇಲ್ಮೈನಲ್ಲಿ ಸಾಫ್ಟ್‌ ಲ್ಯಾಂಡಿಂಗ್ ಆಗುವ ನಿರೀಕ್ಷೆಯಲ್ಲಿದೆ. ಚಂದ್ರಯಾನ-3 ಯೋಜನೆಯ ಚಂದ್ರನ ಲ್ಯಾಂಡಿಂಗ್ ಒಂದು ಮಹತ್ವದ ಸಂದರ್ಭವಾಗಿದ್ದು, ಇದು ನಮ್ಮ ಯುವಜನರ ಮನಸ್ಸಿನಲ್ಲಿ ಕುತೂಹಲ ಹೆಚ್ಚಿಸುವುದಲ್ಲದೇ ಅನ್ವೇಷಣೆಯ ಉತ್ಸಾಹವನ್ನು ಪ್ರಚೋದಿಸುತ್ತದೆ ಎಂದು ಅಧಿಕಾರಿ ಮಧುಸೂಧನ್ ಹುಳಗಿ ತಿಳಿಸಿದ್ದಾರೆ.

ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನದ ಶಕ್ತಿಯನ್ನು ನಾವು ಒಟ್ಟಾಗಿ ಆಚರಿಸುತ್ತಿರುವಾಗ ಇದು ಹೆಮ್ಮೆ ಮತ್ತು ಏಕತೆಯ ಆಳವಾದ ಅರ್ಥವನ್ನು ಉತ್ತೇಜಿಸುತ್ತದೆ. ಈ ಅನುಕ್ರಮದಲ್ಲಿ ಸಂಜೆ 5.15 ರಿಂದ 6.15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಸಭೆ ಆಯೋಜಿಸುವ ಮೂಲಕ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲು ಎಲ್ಲಾ ಪ್ರಾಂಶುಪಾಲರು, ಮೂಲ ಶಿಕ್ಷಣ ಅಧಿಕಾರಿಗಳಿಗೆ (ಬಿಎಸ್‌ಎ) ಸೂಚಿಸಲಾಗಿದೆ ಎಂದು ಹುಳಗಿ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago