ಉಡುಪಿ: ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ. ಪ್ರಪಂಚದ ಹಲವಾರು ದೇಶಗಳ ರಾಕೆಟ್ ಉಡಾವಣೆಗೆ ಇಸ್ರೋ ಸಹಾಯ ಮಾಡಿದೆ. ಇಸ್ರೋಗೆ ಸೌಲಭ್ಯ, ಸೌಕರ್ಯ ಇಲ್ಲ ಅನ್ನುವ ಕಾಲವೊಂದು ಇತ್ತು. ಅಮೆರಿಕದ ನಾಸಾ, ರಷ್ಯಾದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಇವತ್ತು ಭಾರತದ ಇಸ್ರೋವನ್ನು ಪ್ರಪಂಚ ಕೊಂಡಾಡುವ ರೀತಿ ಆಗಿದೆ. ಚಂದ್ರಯಾನ 3 ಚಂದ್ರನ ಅಂಗಳವನ್ನು ಚುಂಬಿಸುತ್ತೆ ಅನ್ನೋದು ಖುಷಿಯ ವಿಚಾರ. ಬೆಳಗ್ಗೆ ಕೃಷ್ಣಮಠಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಭಾರತ 641 ಕೋಟಿ ರೂ ಖರ್ಚು ಮಾಡಿದ್ದು, ವಿಜ್ಞಾನಿಗಳು ಪ್ರಯತ್ನ ಮಾಡಿದ್ದಾರೆ. ವಿಜ್ಞಾನಿಗಳ ಪ್ರಯತ್ನ ಯಶಸ್ಸು ಕಾಣಲಿ ವಿಜ್ಞಾನಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕಳೆದ ಬಾರಿ ಚಂದ್ರಯಾನ ಉಡಾವಣೆ ವಿಫಲವಾದಾಗ ಇಸ್ರೋ ಅಧ್ಯಕ್ಷರಿಗೆ ಪ್ರಧಾನಿ ಸಮಾಧಾನ ಮಾಡಿದ್ದರು. ಕೆಲವು ಸಂದರ್ಭ ಬೇರೆ ಬೇರೆ ಕಾರಣಗಳಿಗೆ ವಿಫಲ ಆಗಬಹುದು. ಪ್ರಧಾನಿಗಳು ವಿಜ್ಞಾನಿಗಳನ್ನು ಹುರುದುಂಬಿಸಿ ಮತ್ತೆ ಹಣ ನೀಡಿದ್ದರು. ಹೀಗಾಗಿ ಮತ್ತೊಮ್ಮೆ ನಮ್ಮ ವಿಜ್ಞಾನಿಗಳು ಈ ಪ್ರಯತ್ನ ಮಾಡಿದ್ದಾರೆ. ಇಲ್ಲಿಯ ತನಕ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಕೊನೆಯ ಪ್ರಕ್ರಿಯೆವರೆಗೂ ಯಶಸ್ಸು ಕಾಣಲಿ ಅಂತ ಶುಭ ಹಾರೈಸುತ್ತೇನೆ ಎಂದು ಶುಭಕೂರಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…