ಉಡುಪಿ: ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ. ಪ್ರಪಂಚದ ಹಲವಾರು ದೇಶಗಳ ರಾಕೆಟ್ ಉಡಾವಣೆಗೆ ಇಸ್ರೋ ಸಹಾಯ ಮಾಡಿದೆ. ಇಸ್ರೋಗೆ ಸೌಲಭ್ಯ, ಸೌಕರ್ಯ ಇಲ್ಲ ಅನ್ನುವ ಕಾಲವೊಂದು ಇತ್ತು. ಅಮೆರಿಕದ ನಾಸಾ, ರಷ್ಯಾದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಇವತ್ತು ಭಾರತದ ಇಸ್ರೋವನ್ನು ಪ್ರಪಂಚ ಕೊಂಡಾಡುವ ರೀತಿ ಆಗಿದೆ. ಚಂದ್ರಯಾನ 3 ಚಂದ್ರನ ಅಂಗಳವನ್ನು ಚುಂಬಿಸುತ್ತೆ ಅನ್ನೋದು ಖುಷಿಯ ವಿಚಾರ. ಬೆಳಗ್ಗೆ ಕೃಷ್ಣಮಠಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಭಾರತ 641 ಕೋಟಿ ರೂ ಖರ್ಚು ಮಾಡಿದ್ದು, ವಿಜ್ಞಾನಿಗಳು ಪ್ರಯತ್ನ ಮಾಡಿದ್ದಾರೆ. ವಿಜ್ಞಾನಿಗಳ ಪ್ರಯತ್ನ ಯಶಸ್ಸು ಕಾಣಲಿ ವಿಜ್ಞಾನಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕಳೆದ ಬಾರಿ ಚಂದ್ರಯಾನ ಉಡಾವಣೆ ವಿಫಲವಾದಾಗ ಇಸ್ರೋ ಅಧ್ಯಕ್ಷರಿಗೆ ಪ್ರಧಾನಿ ಸಮಾಧಾನ ಮಾಡಿದ್ದರು. ಕೆಲವು ಸಂದರ್ಭ ಬೇರೆ ಬೇರೆ ಕಾರಣಗಳಿಗೆ ವಿಫಲ ಆಗಬಹುದು. ಪ್ರಧಾನಿಗಳು ವಿಜ್ಞಾನಿಗಳನ್ನು ಹುರುದುಂಬಿಸಿ ಮತ್ತೆ ಹಣ ನೀಡಿದ್ದರು. ಹೀಗಾಗಿ ಮತ್ತೊಮ್ಮೆ ನಮ್ಮ ವಿಜ್ಞಾನಿಗಳು ಈ ಪ್ರಯತ್ನ ಮಾಡಿದ್ದಾರೆ. ಇಲ್ಲಿಯ ತನಕ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಕೊನೆಯ ಪ್ರಕ್ರಿಯೆವರೆಗೂ ಯಶಸ್ಸು ಕಾಣಲಿ ಅಂತ ಶುಭ ಹಾರೈಸುತ್ತೇನೆ ಎಂದು ಶುಭಕೂರಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…