ಬೆಂಗಳೂರು: ಜೆ.ಜೆ. ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿರುವಂತೆ ಇನ್ನೊಂದು ತಿರುವು ಸಿಕ್ಕಿದ್ದು, ಉರ್ದು ಮಾತನಾಡದಿರುವುದೇ ಕೊಲೆಗೆ ಕಾರಣ ಹೊರತು ಬೈಕ್ ಅಪಘಾತವಲ್ಲ ಎಂಬ ಅಂಶ ಗೊತ್ತಾಗಿದೆ.
ಚಂದ್ರು ಕೊಲೆಗೆ ಕಾರಣವೇನು ಎಂಬ ಬಗ್ಗೆ ಸಿಐಡಿ ಅಧಿಕಾರಿಗಳು ಸಲ್ಲಿಸಿರುವ 179 ಪುಟಗಳ ಚಾರ್ಜ್ ಶೀಟ್ನಲ್ಲಿ ಈ ಅಂಶ ಉಲ್ಲೇಖವಾಗಿದೆ. ಈಗಾಗಲೇ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಚಂದ್ರು ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಆರೋಪಿಯು ಆತನನ್ನು ಕೊಲೆಗೈದಿದ್ದಾನೆ.
ಸೈಮನ್ ಹುಟ್ಟುಹಬ್ಬ ಮುಗಿಸಿ ಚಿಕನ್ ಕಬಾಬ್ ತಿನ್ನಲೆಂದು ಸೈಮನ್ ಮತ್ತು ಚಂದ್ರು ಬೈಕ್ ನಿಲ್ಲಿಸಿ ಅಲ್ಲೇ ಇದ್ದ ಹೊಟೇಲ್ಗೆ ಹೋಗಿದ್ದ ವೇಳೆ ಆರೋಪಿ ಶಾಹೀನ್ ಎದುರಾಗುತ್ತಾನೆ. ಈ ವೇಳೆ ಶಾಹೀನ್ ಉರ್ದುವಿನಲ್ಲಿ ಬೈಯಲು ಆರಂಭಿಸಿದ್ದಾನೆ. ಆದರೆ ಚಂದ್ರು ಮತ್ತು ಸೈಮನ್ ನಾವು ನಿಮಗೆ ಏನೂ ಹೇಳಲಿಲ್ಲ ಎಂದಾಗ ಶಾಹೀನ್ ಜಗಳ ತೆಗೆದಿದ್ದ. ಈ ಜಗಳ ಚಂದ್ರು ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಸಿಐಡಿ ಅಧಿಕಾರಿಗಳ ವಶದಲ್ಲಿರುವ ಆರೋಪಿ ಶಾಹೀನ್ನನ್ನು ಈಗಾಗಲೇ ಹಲವು ಬಾರಿ ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆ ವೇಳೆ ಚಂದ್ರು ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕಾಗಿ ಆತ ಕೊಲೆಗೈದಿದ್ದಾನೆ ಎಂಬ ಅಂಶ ಅಧಿಕಾರಿಗಳಿಗೆ ಗೊತ್ತಾಗಿದೆ ಎನ್ನಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…