ತಿರುವನಂತಪುರಂ: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಈ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…