ತಿರುವನಂತಪುರಂ: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಈ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…