ರಾಜ್ಯ ನ್ಯೂಸ್

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ – vishwanews24

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ

ಬೆಂಗಳೂರು : ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್, “ಚಕ್ರವರ್ತಿ ಸೂಲಿಬೆಲೆ, ಖರ್ಗೆ ಅವರ ಕುರಿತು ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ” ಎಂದು ಟ್ವೀಟ್ ಮಾಡಿದೆ.

ಜೊತೆಗೆ “ಸುಳ್ಳುಗಳನ್ನು ಹಬ್ಬಿಸುತ್ತ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು” ಗೃಹಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಚಕ್ರವರ್ತಿ ಸೂಲಿಬೆಲೆ ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಕಲುಬುರುಗಿಯ ಇಎಸ್ ಐ ಆಸ್ಪತ್ರೆ ವಿಚಾರವಾಗಿ ಖರ್ಗೆ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಇಎಸ್ ಐ ಆಸ್ಪತ್ರೆಯ ಡ್ರೋನ್ ದೃಶ್ಯ ನೋಡಿದರೆ ಖರ್ಗೆ ಹೆಸರು ಕಾಣಿಸುತ್ತದೆ. ಆಸ್ಪತ್ರೆ ಮೇಲ್ಭಾಗದಿಂದ ನೋಡಿದರೆ ಅವರ ಹೆಸರು ಕಾಣಿಸುತ್ತದೆ. ಸರ್ಕಾರಿ ಕಟ್ಟಡದ ಮೇಲೆ ಖರ್ಗೆ ಹೆಸರು ಯಾಕೆ? ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು. ‘ಏಯ್ ಪುಣ್ಯಾತ್ಮ ಯಾರಪ್ಪನ ದುಡ್ಡು ಎಂದು ಮಾಡಿದ್ಯಪ್ಪ? ನಾಚಿಕೆಯಾಗಲ್ವ?’ ಎಂದು ಖರ್ಗೆ ಅವರನ್ನು ಏಕವಚದಲ್ಲಿ ಸಂಬೋಧಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago