ಬೆಂಗಳೂರು: ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಮಾಡಿದ್ದಾರೆ. ಯಾರು ಸ್ಪರ್ಧೆ ಮಾಡ್ತಾರೆ ಅನ್ನೋದು ನಮಗೆ ಮುಖ್ಯ ಅಲ್ಲ. ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ. ಅದಕ್ಕೆ ಬೇಕಾದ ರಣ ನೀತಿಯನ್ನು ನಾವು ಮಾಡ್ತೀವಿ. ಅವರು ಯಾರನ್ನಾದರೂ ನಿಲ್ಲಿಸಿಕೊಳ್ಳಲಿ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಶಿಗ್ಗಾವಿಯಲ್ಲಿ ಅಜ್ಜಂ ಫೀರ್ ಬಂಡಾಯ ಸ್ಪರ್ಧೆ ವಿಚಾರವಾಗಿ, ಪ್ರಯತ್ನ ಮಾಡಿ ಮನವೊಲಿಕೆ ಮಾಡ್ತೀವಿ. ನಮ್ಮವರೇ ಹೆಚ್ಚು ಬಂಡಾಯ ಎದ್ದರೆ ಕಷ್ಟ. ಮನವೊಲಿಕೆ ಮಾಡುವ ಕೆಲಸ ಪಕ್ಷ ಮಾಡುತ್ತದೆ. ಅಂತಿಮವಾಗಿ ಯಾರು ಗೆಲ್ತಾರೆ ಎಂಬ ಮಾಹಿತಿ ಆಧಾರದ ಮೇಲೆಯೇ ಟಿಕೆಟ್ ಕೊಟ್ಟಿರುತ್ತಾರೆ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದಿದ್ದಾರೆ.
ಶಾಸಕ ಸತೀಶ್ ಸೈಲ್ ಬಂಧನ ವಿಚಾರ 2009ರ ಕೇಸ್ ಇದಾಗಿದ್ದು, ಅನಧಿಕೃತ ಗಣಿಗಾರಿಕೆ ಎಂದು ಕೋರ್ಟ್ ಹೇಳಿದೆ. ಹಿಂದೆ ಸೀಜ್ ಮಾಡಲಾಗಿತ್ತು. ಗೊತ್ತಿಲ್ಲದಂತೆ ರಫ್ತು ಮಾಡಿದ್ದರು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೆಯೂ ಅರೆಸ್ಟ್ ಆಗಿದ್ದರು, ನಂತರ ಬೇಲ್ ಮೇಲೆ ಬಿಟ್ಟಿದ್ದರು. ಕಾನೂನಿನಲ್ಲಿ ಮುಂದೆ ಏನಾಗಲಿದೆ ಎಂದು ನೋಡೋಣ ಎಂದಿದ್ದಾರೆ.
ಮುಡಾ ಕೇಸ್ ವಿಚಾರವಾಗಿ, ಸಿಎಂ ಮೇಲ್ಮನವಿ ಸಲ್ಲಿಸಿದ್ದಾರೆ. ಡಬ್ಬಲ್ ಬೆಂಚ್ಗೆ ಹೋಗೋದಕ್ಕೆ ಕಾನೂನಿನಲ್ಲಿ ಅವಕಾಶ ಇದೆ. ಕೋರ್ಟ್ನಲ್ಲಿ ಏನು ತೀರ್ಮಾನ ಆಗುತ್ತೆ ನೋಡೋಣ ಎಂದಿದ್ದಾರೆ.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…