Featured

ಚನ್ನಪಟ್ಟಣ ಉಪಚುನಾವಣೆ : ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕೆ – vishwanews24

ಚನ್ನಪಟ್ಟಣ ಉಪಚುನಾವಣೆ : ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕೆ

ಬೆಂಗಳೂರು: ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಕೊನೆ ಕ್ಷಣದವರೆಗೂ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಇಂದು ಸಂಜೆ 4 ಗಂಟೆಗೆ ಬಿಜೆಪಿ ಪರಿಷತ್‌ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ಭೇಟಿಗಾಗಿ ಸಿಪಿವೈ ತೆರಳಿದ್ದಾರೆ. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಕೆಗೆ ವಕೀಲರನ್ನು ಯೋಗೇಶ್ವರ್‌ ಸಂಪರ್ಕಿಸಿದ್ದಾರೆ.

ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್‌, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್‌ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago