ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.
ಕೊನೆ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ಭೇಟಿಗಾಗಿ ಸಿಪಿವೈ ತೆರಳಿದ್ದಾರೆ. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಕೆಗೆ ವಕೀಲರನ್ನು ಯೋಗೇಶ್ವರ್ ಸಂಪರ್ಕಿಸಿದ್ದಾರೆ.
ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…