ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.
ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ನಿಖಿಲ್ಗೆ ಹೆಚ್ಡಿಕೆ, ಆರ್.ಅಶೋಕ್, ಸದಾನಂದಗೌಡ, ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…