Featured

ಚನ್ನಪಟ್ಟಣ ನನ್ನ ಹೃದಯದಲ್ಲಿದೆ ; ಜನ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡುವೆ : ಡಿ.ಕೆ.ಶಿ – vishwanews24

ಚನ್ನಪಟ್ಟಣ ನನ್ನ ಹೃದಯದಲ್ಲಿದೆ ,ಜನ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡುವೆ : ಡಿ.ಕೆ.ಶಿ

ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆ ಮೂಲಕ ಈ ಭಾಗ ನನಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು ಎಂದರು.

ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ ಎಂದರು.

ಹೀಗಾಗಿ ಇಂದು ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago