ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.
ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು.
ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್ಗೆ ಸ್ಪಾನ್ಸರ್ ಮಾಡಿತ್ತು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…