ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24
ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ; ಪ್ರಯಾಣಿಕರು ಪವಾಡಸದೃಶವಾಗಿ ಪಾರು
ಬೆಳಗಾವಿ: ಬೆಂಗಳೂರಿನ ನೆಲಮಂಗಲದಲ್ಲಿ ಕಳೆದ ಡಿಸೆಂಬರ್ನಲ್ಲಿ ನಡೆದಿದ್ದ ಭೀಕರ ಅಪಘಾತವನ್ನು ನೆನಪಿಸುವಂಥ ರೀತಿಯಲ್ಲಿ ಬೆಳಗಾವಿಯಲ್ಲಿ ಭೀಕರ ಆಕ್ಸಿಡೆಂಟ್ ಸಂಭವಿಸಿದೆ. ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ. ನೆಲಮಂಗಲದಲ್ಲಿ ನಡೆದಿದ್ದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು ಕಂಡಿದ್ದರೆ, ಬೆಳಗಾವಿ ಅಪಘಾತದಲ್ಲಿ ಕಾರ್ನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದರೂ, ಕಾರ್ನಲ್ಲಿದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.
ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದವರನ್ನ ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿತ್ತು. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.
ಕಾಪು: ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು: ಇಬ್ಬರ ಬಂಧನ – vishwanews24
ಇಬ್ಬರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಯಾಣಿಕರು ಪಾರಾದ ರೀತಿಗೇ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶೋಕ್ ಲೇಲ್ಯಾಂಡ್ ಕಂಪನಿಯ ಕಾಂಕ್ರಿಟ್ ಲಾರಿ ಬಿದ್ದ ರಭಸಕ್ಕೆ ಇಡೀ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಕಾರ್ನ ಒಳಗಡೆಯ ಇಬ್ಬರು ಪ್ರಯಾಣಿಕರಿದ್ದರು. ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿದ್ದರು.
ರಕ್ಷಣೆಗೆ ಒಳಗಾದ ಮೂವರ ಪೈಕಿ ಇಬ್ಬರನ್ನು ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ್ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಬೆಳಗಾವಿಗೆ ಬರುವಾಗ ಈ ಘಟನೆ ನಡೆದಿದೆ. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾಯುತ್ತಿದ್ದರು ಎನ್ನಲಾಗಿದೆ.
ಕೇವಲ 15 ನಿಮಿಷದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಜನರು, ಎರಡು ಕ್ರೇನ್ ಬಳಸಿ ಕಾರ್ನಲ್ಲಿದ್ದವರನ್ನು ರಕ್ಷಿಸಲಾಗಿದೆ. ಲಾರಿಯನ್ನ ಮೊದಲಿಗೆ ಕ್ರೇನ್ ಮೂಲಕ ಮೇಲೆತ್ತಲಾಗಿದೆ. ಅನಂತರ ಲಾರಿ ಅಡಿಯಲ್ಲಿದ್ದ ಕಾರನ್ನ ಸಾರ್ವಜನಿಕರು ಹೊರಗೆ ತೆಗೆದಿದ್ದಾರೆ. ಇಬ್ಬರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಹಾವೇರಿ ಸ್ವಾತಿ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್ – vishwanews24
