ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​ – Vishwanews24

Featured, ರಾಷ್ಟ್ರ ನ್ಯೂಸ್

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​

ನವದೆಹಲಿ: ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ.

ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ನವ ಮಂಗಳೂರು ಬಂದರಿಗೆ ಆಗಮಿಸಿದ  2 ನೇ ಬೃಹತ್ ಹಡಗು ‘ಸೆವೆನ್ ಸೀಸ್ ಎಕ್ಸ್‌ಪ್ಲೋರರ್ – Vishwanews24

ಮೃತ ವ್ಯಕ್ತಿಯನ್ನು ಹರಿಕೇಶ್​ ಕುಮಾರ್​ ದುಬೆ ಎಂದು ಗುರುತಿಸಲಾಗಿದೆ. ಈತ ನಿನ್ನೆ (ಡಿ.02) ದೆಹಲಿಯಿಂದ ಉತ್ತರ ಪ್ರದೇಶದ ಕಾನ್ಪುರ್​ಗೆ ತೆರಳುತ್ತಿದ್ದ ನಿಲಾಂಚಲ್​ ಎಕ್ಸ್​ಪ್ರೆಸ್​ ರೈಲನ್ನು ಏರಿದ್ದ. ರೈಲು ಬಿಹಾರದ ದನ್ವಾರ್​ ಮತ್ತು ಉತ್ತರ ಪ್ರದೇಶದ ಸೊಮ್ನಾ ನಡುವೆ ಇದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ರೈಲ್ವೆ ಹಳಿಗಾಗಿ ಬಳಸುತ್ತಿದ್ದ ಕಬ್ಬಿಣದ ಸಲಾಕೆ ಕಿಟಕಿಯಿಂದ ತೂರಿ ಬಂದು ದುಬೆ ಕುತ್ತಿಗೆಯನ್ನು ನುಸುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬೆನ್ನಲ್ಲೇ ರೈಲನ್ನು ಆಲಿಗಢ ಜಂಕ್ಷನ್​ನಲ್ಲಿ ನಿಲ್ಲಿಸಲಾಯಿತು. ಬಳಿಕ ಆತನ ಮೃತದೇಹವನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಿ ಮಾಹಿತಿ ನೀಡಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಹೆಜಮಾಡಿ ಟೋಲ್ – ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶಕ್ಕೆ ಪ್ರಸ್ತಾಪ : ಸಚಿವ ವಿ. ಸುನೀಲ್ ಕುಮಾರ್ – Vishwanews24

Leave a Reply