ನವದೆಹಲಿ: ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ.
ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಹರಿಕೇಶ್ ಕುಮಾರ್ ದುಬೆ ಎಂದು ಗುರುತಿಸಲಾಗಿದೆ. ಈತ ನಿನ್ನೆ (ಡಿ.02) ದೆಹಲಿಯಿಂದ ಉತ್ತರ ಪ್ರದೇಶದ ಕಾನ್ಪುರ್ಗೆ ತೆರಳುತ್ತಿದ್ದ ನಿಲಾಂಚಲ್ ಎಕ್ಸ್ಪ್ರೆಸ್ ರೈಲನ್ನು ಏರಿದ್ದ. ರೈಲು ಬಿಹಾರದ ದನ್ವಾರ್ ಮತ್ತು ಉತ್ತರ ಪ್ರದೇಶದ ಸೊಮ್ನಾ ನಡುವೆ ಇದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ರೈಲ್ವೆ ಹಳಿಗಾಗಿ ಬಳಸುತ್ತಿದ್ದ ಕಬ್ಬಿಣದ ಸಲಾಕೆ ಕಿಟಕಿಯಿಂದ ತೂರಿ ಬಂದು ದುಬೆ ಕುತ್ತಿಗೆಯನ್ನು ನುಸುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬೆನ್ನಲ್ಲೇ ರೈಲನ್ನು ಆಲಿಗಢ ಜಂಕ್ಷನ್ನಲ್ಲಿ ನಿಲ್ಲಿಸಲಾಯಿತು. ಬಳಿಕ ಆತನ ಮೃತದೇಹವನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಿ ಮಾಹಿತಿ ನೀಡಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…