Featured

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​ – Vishwanews24

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​

ನವದೆಹಲಿ: ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ.

ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಹರಿಕೇಶ್​ ಕುಮಾರ್​ ದುಬೆ ಎಂದು ಗುರುತಿಸಲಾಗಿದೆ. ಈತ ನಿನ್ನೆ (ಡಿ.02) ದೆಹಲಿಯಿಂದ ಉತ್ತರ ಪ್ರದೇಶದ ಕಾನ್ಪುರ್​ಗೆ ತೆರಳುತ್ತಿದ್ದ ನಿಲಾಂಚಲ್​ ಎಕ್ಸ್​ಪ್ರೆಸ್​ ರೈಲನ್ನು ಏರಿದ್ದ. ರೈಲು ಬಿಹಾರದ ದನ್ವಾರ್​ ಮತ್ತು ಉತ್ತರ ಪ್ರದೇಶದ ಸೊಮ್ನಾ ನಡುವೆ ಇದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ರೈಲ್ವೆ ಹಳಿಗಾಗಿ ಬಳಸುತ್ತಿದ್ದ ಕಬ್ಬಿಣದ ಸಲಾಕೆ ಕಿಟಕಿಯಿಂದ ತೂರಿ ಬಂದು ದುಬೆ ಕುತ್ತಿಗೆಯನ್ನು ನುಸುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬೆನ್ನಲ್ಲೇ ರೈಲನ್ನು ಆಲಿಗಢ ಜಂಕ್ಷನ್​ನಲ್ಲಿ ನಿಲ್ಲಿಸಲಾಯಿತು. ಬಳಿಕ ಆತನ ಮೃತದೇಹವನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಿ ಮಾಹಿತಿ ನೀಡಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago