ನವದೆಹಲಿ: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್ವೇಸ್ ವಿಮಾನದಲ್ಲಿ ನಡೆದಿದೆ.
ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.
ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತು ಸೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತದೆ. ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ದೃಶ್ಯದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ.
ಹಳೆಯ ಸ್ನೇಹಿತರು ವಿಮಾನದಲ್ಲಿ ಎದುರಾದಾಗ ಯಾವುದೋ ವಿಷಯದ ಕುರಿತಂತೆ ಮಾತಿನ ಚಕಮಕಿ ನಡೆದು ಸಂಘರ್ಷ ನಡೆದಿದೆ ಎಂದು ಹೇಳಲಾಗಿದೆ. ಬ್ಯಾಂಕಾಕ್ನಿಂದ ಕೋಲ್ಕತ್ತಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದ ಸಿಬ್ಬಂದಿ ಕೊನೆಗೂ ಇಬ್ಬರನ್ನೂ ಜಗಳ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…