Featured

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO

ನವದೆಹಲಿ: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ.

ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತು ಸೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತದೆ. ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ದೃಶ್ಯದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ.

ಹಳೆಯ ಸ್ನೇಹಿತರು ವಿಮಾನದಲ್ಲಿ ಎದುರಾದಾಗ ಯಾವುದೋ ವಿಷಯದ ಕುರಿತಂತೆ ಮಾತಿನ ಚಕಮಕಿ ನಡೆದು ಸಂಘರ್ಷ ನಡೆದಿದೆ ಎಂದು ಹೇಳಲಾಗಿದೆ. ಬ್ಯಾಂಕಾಕ್‌ನಿಂದ ಕೋಲ್ಕತ್ತಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದ ಸಿಬ್ಬಂದಿ ಕೊನೆಗೂ ಇಬ್ಬರನ್ನೂ ಜಗಳ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

16 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

16 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago