ಭಟ್ಕಳ, : ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಗೆ ಮರದ ಕೊಂಬೆಯೊಂದು ಬಲವಾಗಿ ಅಪ್ಪಳಿಸಿದ್ದರಿಂದ ಬಸ್ ನಿರ್ವಾಹಕ ಮೃತಪಟ್ಟ ಘಟನೆ ಗುರುವಾರ ರಾತ್ರಿ ಭಟ್ಕಳದಲ್ಲಿ ನಡೆದಿದೆ.
ಮೃತರನ್ನು ಬೆಳಗಾವಿ ಮೂಲದ ಪಂಚಯ್ಯ ಮಠಪತಿ(35) ಎಂದು ಗುರುತಿಸಲಾಗಿದೆ.
ಮಂಗಳೂರು-ಭಟ್ಕಳ ನಡುವಿನ ಈ ಬಸ್ ಗುರುವಾರ ರಾತ್ರಿ 8:55ರ ಸುಮಾರಿಗೆ ಭಟ್ಕಳ ತಲುಪಿತ್ತು. ಅಲ್ಲಿ ಪ್ರಯಾಣಿಕರನ್ನು ಇಳಿಸಿದ ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕ ಪಂಚಯ್ಯ 9:30ರ ಸುಮಾರಿಗೆ ಬಸ್ಸಿನಲ್ಲಿ ಸಾಗರ ರಸ್ತೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ಡಿಪೋಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾವೊಂದಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಚಾಲಕ ಬಸ್ಸನ್ನು ರಸ್ತೆ ಬದಿಗಿಳಿಸಿದಾಗ ಮರದ ದೊಡ್ಡ ಕೊಂಬೆಯೊಂದು ಬಸ್ಸಿನೊಳಗೆ ನುಗ್ಗಿದೆ. ಈ ವೇಳೆ ಅಲ್ಲೇ ಸೀಟಿನಲ್ಲಿ ಕುಳಿತಿದ್ದ ಪಂಚಯ್ಯರಿಗೆ ಕೊಂಬೆ ರಭಸವಾಗಿ ಅಪ್ಪಳಿಸಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ತಿಳಿದುಬಂದಿದೆ.
ಈ ಬಗ್ಗೆ ಭಟ್ಕಳ ಗ್ರಾಮೀಣ ಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…