ಭಟ್ಕಳ, : ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಗೆ ಮರದ ಕೊಂಬೆಯೊಂದು ಬಲವಾಗಿ ಅಪ್ಪಳಿಸಿದ್ದರಿಂದ ಬಸ್ ನಿರ್ವಾಹಕ ಮೃತಪಟ್ಟ ಘಟನೆ ಗುರುವಾರ ರಾತ್ರಿ ಭಟ್ಕಳದಲ್ಲಿ ನಡೆದಿದೆ.
ಮೃತರನ್ನು ಬೆಳಗಾವಿ ಮೂಲದ ಪಂಚಯ್ಯ ಮಠಪತಿ(35) ಎಂದು ಗುರುತಿಸಲಾಗಿದೆ.
ಮಂಗಳೂರು-ಭಟ್ಕಳ ನಡುವಿನ ಈ ಬಸ್ ಗುರುವಾರ ರಾತ್ರಿ 8:55ರ ಸುಮಾರಿಗೆ ಭಟ್ಕಳ ತಲುಪಿತ್ತು. ಅಲ್ಲಿ ಪ್ರಯಾಣಿಕರನ್ನು ಇಳಿಸಿದ ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕ ಪಂಚಯ್ಯ 9:30ರ ಸುಮಾರಿಗೆ ಬಸ್ಸಿನಲ್ಲಿ ಸಾಗರ ರಸ್ತೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ಡಿಪೋಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾವೊಂದಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಚಾಲಕ ಬಸ್ಸನ್ನು ರಸ್ತೆ ಬದಿಗಿಳಿಸಿದಾಗ ಮರದ ದೊಡ್ಡ ಕೊಂಬೆಯೊಂದು ಬಸ್ಸಿನೊಳಗೆ ನುಗ್ಗಿದೆ. ಈ ವೇಳೆ ಅಲ್ಲೇ ಸೀಟಿನಲ್ಲಿ ಕುಳಿತಿದ್ದ ಪಂಚಯ್ಯರಿಗೆ ಕೊಂಬೆ ರಭಸವಾಗಿ ಅಪ್ಪಳಿಸಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ತಿಳಿದುಬಂದಿದೆ.
ಈ ಬಗ್ಗೆ ಭಟ್ಕಳ ಗ್ರಾಮೀಣ ಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…